ಮಸೀದಿಯಲ್ಲಿ ದೇಶ ವಿರೋಧಿ ಘೋಷಣೆ

Webdunia
ಶನಿವಾರ, 9 ಏಪ್ರಿಲ್ 2022 (18:29 IST)
ಜಾಮಿಯಾ ಮಸೀದಿಯೊಳಗೆ ಶುಕ್ರವಾರ ಪ್ರಾರ್ಥನೆ ವೇಳೆ ದೇಶ ವಿರೋಧಿ ಮತ್ತು ಪ್ರಚೋದನಕಾರಿ ಘೋಷಣೆಗಳಿಗೆ ಸಂಬಂಧಿಸಿ ಒಟ್ಟು 13 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.
 
ಶ್ರೀನಗರ ಪೊಲೀಸರು ನಿನ್ನೆ ಜಾಮಿಯಾ ಮಸೀದಿ ಆವರಣದಲ್ಲಿ ಗೂಂಡಾಗಿರಿ ಮತ್ತು ದೇಶ ವಿರೋಧಿ ಘೋಷಣೆ ಕೂಗಿದ ಪ್ರಕರಣದಲ್ಲಿ ಬಂಧಿತ 13 ಆರೋಪಿಗಳ ಚಿತ್ರಗಳನ್ನು ಬಿಡುಗಡೆ ಮಾಡಿದ್ದಾರೆ.
 
ಜಾಮಿಯಾ ಮಸೀದಿಯಲ್ಲಿ ಶುಕ್ರವಾರದ ಪ್ರಾರ್ಥನೆಗೆ ಅಡ್ಡಿಪಡಿಸಿ, ಹಾಜರಾದವರನ್ನು ಪ್ರಚೋದಿಸುವ ಮೂಲಕ ಕಾನೂನು ಮತ್ತು ಸುವ್ಯವಸ್ಥೆಯನ್ನು ಹಾಳು ಮಾಡಲು ಪಾಕಿಸ್ಥಾನಿ ಭಯೋತ್ಪಾದಕ ಸಂಘಟನೆಗಳ ನಿರ್ವಾಹಕರಿಂದ ಉತ್ತಮ ಯೋಜಿತ ಸಂಚಿನ ಭಾಗವಾಗಿದೆ ಎಂಬುದು ಪ್ರಾಥಮಿಕ ತನಿಖೆಯ ವೇಳೆ ತಿಳಿದುಬಂದಿದೆ' ಎಂದು ಪೊಲೀಸ್ ಅಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ.
 
ದೇಶ ವಿರೋಧಿ ಘೋಷಣೆಗಳನ್ನು ಕೂಗಿದ ಯುವಕರು ಪೊಲೀಸರು ಮತ್ತು ಕೆಲವರ ಆಕ್ಷೇಪದ ಬಳಿಕ 2-3 ನಿಮಿಷಗಳಲ್ಲಿ ಸ್ಥಳದಿಂದ ಪಲಾಯನ ಗೈದಿದ್ದರು.
 
ಭದ್ರತಾ ಪರಿಸ್ಥಿತಿಯನ್ನು ಕಾಪಾಡುವ ಬಗ್ಗೆ ಭದ್ರತೆ ಮತ್ತು ಅರೆಸೇನಾ ಪಡೆಗಳು ಜಾಗರೂಕವಾಗಿವೆ. ಯಾವುದೇ ಧರ್ಮದ ದೇಗುಲ, ಚರ್ಚ್, ಮಸೀದಿ, ಮಂದಿರ ಅಥವಾ ಗುರುದ್ವಾರವಾಗಿರಲಿ ಸುರಕ್ಷಿತವಾಗಿರಬೇಕು ಎಂದು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಬಾರಾಮುಲ್ಲಾ ಜಿಲ್ಲೆಯ ಪಟ್ಟನ್‌ನಲ್ಲಿ ಹೇಳಿಕೆ ನೀಡಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಸಿಎಂ ಬದಲಾವಣೆಗೆ ಬಿಗ್ ಟ್ವಿಸ್ಟ್: ರಾಜೀನಾಮೆಗೆ ಸಿದ್ದರಾಮಯ್ಯ ನಿರ್ಧಾರ?

ಸದ್ಯಕ್ಕೆ ಕರ್ನಾಟಕದಲ್ಲಿ ಸಿಎಂ ಬದಲಾವಣೆ ಇಲ್ಲ: ದೆಹಲಿಗೆ ಸಿದ್ದು, ಡಿಕೆಶಿನ ಕರೆಸಿಕೊಂಡಿದ್ದು ಈ ಕಾರಣಕ್ಕೆ ಅಂತೆ

ಗಡಿ ಸುರಕ್ಷಿತವಾಗಿರುವಲ್ಲಿ ಪುರುಷರಿಗಿಂತ ಮಹಿಳೆಯರದ್ದೆ ಹೆಚ್ಚು ಪಾಲು: ಅಮಿತ್ ಶಾ ಶ್ಲಾಘನೆ

Rain Alert: ಕರಾವಳಿ ಮೀನುಗಾರರಿಗೆ ವಿಶೇಷ ಸೂಚನೆ ಕೊಟ್ಟ ಇಲಾಖೆ

FIFA ವರ್ಲ್ಡ್ ಕಪ್ 2026: ಭಾರತದಿಂದ ಆಯ್ಕೆಯಾದ ಮೊದಲ ಛಾಯಾಗ್ರಾಹಕಿ ಇವರೇ

ಮುಂದಿನ ಸುದ್ದಿ
Show comments