Webdunia - Bharat's app for daily news and videos

Install App

ಕರುಳ ಬಳ್ಳಿಯೆಂದೂ ನೋಡದೆ ಅಮಾನುಷ ಕೃತ್ಯವೆಸಗಿದ ತಾಯಿ

Krishnaveni K
ಸೋಮವಾರ, 4 ಮಾರ್ಚ್ 2024 (10:32 IST)
ಬೆಂಗಳೂರು: ಪ್ರಪಂಚದಲ್ಲಿ ಕೆಟ್ಟ ಮಗುವಿರಬಹುದು ಆದರೆ ಕೆಟ್ಟ ತಾಯಿಯಿರಲ್ಲ ಎಂಬ ಮಾತನ್ನು ಈ ಪಾಪಿ ತಾಯಿ ಸುಳ್ಳು ಮಾಡಿದ್ದಾಳೆ. ತನ್ನ ಕರುಳಬಳ್ಳಿಯ ಮೇಲೆಯೇ ಅಮಾನುಷ ಕೃತ್ಯವೆಸಗಿದ್ದಾಳೆ.

ಇಂತಹದ್ದೊಂದು ಅಮಾನವೀಯ ಕೃತ್ಯ ಬೆಂಗಳೂರಿನಲ್ಲಿ ನಡೆದಿದೆ. ಸುಮಾರು 3 ವರ್ಷದ ಮುಗ್ಧ ಮಗುವನ್ನು ಹೊಡೆದು-ಬಡಿದು ಮಾಡಿ ಮನೆಯಲ್ಲಿಯೇ ಕೂಡಿ ಹಾಕಿ ಚಿತ್ರಹಿಂಸೆ ನೀಡಿದ ಘಟನೆ ಬಯಲಾಗಿದೆ. ಸ್ಥಳೀಯರ ಸಹಾಯದಿಂದ ಮಗುವನ್ನು ರಕ್ಷಿಸಲಾಗಿದೆ. ಈ ವೇಳೆ ಮಗು ತನಗಾದ ಭಯಾನಕ ಅನುಭವವನ್ನು ಹೇಳಿಕೊಂಡಿದೆ.

ತಾಯಿ ಜೊತೆ ಆಕೆಯ ಪ್ರಿಯಕರನೂ ಸೇರಿಕೊಂಡು ಚಿತ್ರಹಿಂಸೆ ನೀಡುತ್ತಿದ್ದ. ವಿಚ್ಛೇದಿತ ತಾಯಿಗೆ ಮಗು ಬೇಡವಾಗಿತ್ತು. ನೀನು ನನ್ನ ಜೊತೆಗೆ ಇರುವುದು ಬೇಡ ಎಂದು ಚಿತ್ರ ಹಿಂಸೆ ನೀಡುತ್ತಿದ್ದಳು. ಮಗುನ್ನು ದಿನವಿಡೀ ಮನೆಯಲ್ಲಿ ಕೂಡಿ ಹಾಕಿ ಒಬ್ಬಂಟಿಯಾಗಿ ಬಿಟ್ಟು ಹೊರಗೆ ಹೋಗುತ್ತಿದ್ದಳು.

ಕೊನೆಗೂ ಇದು ಸ್ಥಳೀಯರ ಗಮನಕ್ಕೆ ಬಂದಿದ್ದು, ಸಂಘಟನೆಯೊಂದರ ಗಮನಕ್ಕೆ ತಂದಿದ್ದಾರೆ. ಬಳಿಕ ಅವರು ಮಗುವನ್ನು ರಕ್ಷಿಸಿದ್ದಾರೆ. ಮಗುವಿನ ಮೈ ತುಂಬಾ ಗಾಯಗಳಾಗಿವೆ. ಅಮ್ಮನ ಜೊತೆ ಅಂಕಲ್ ಕೂಡಾ ಕುಕ್ಕರ್ ನಿಂದ ತಲೆಗೆ ಹೊಡೆದರು, ಕಾಲಿನಲ್ಲಿ ಒದ್ದಿದ್ದಾರೆ ಎಂದೆಲ್ಲಾ ಮಗು ಹೇಳಿಕೊಂಡಿದೆ. ಮಗುವಿನ ಅವಸ್ಥೆ ನೋಡಿ ಸ್ಥಳೀಯರು ಮರುಗಿದ್ದಾರೆ. ತಾಯಿಯನ್ನು ವಿಚಾರಣೆ ನಡೆಸಿದಾಗ ಮನೆಯಲ್ಲಿ ಒಬ್ಬಂಟಿಯಾಗಿದ್ದು, ಕೆಲಸಕ್ಕೆ ಹೋಗುವಾಗ ಅನಿವಾರ್ಯವಾಗಿ ಮಗುವನ್ನು ಮನೆಯಲ್ಲಿ ಬಿಟ್ಟು ಹೋಗಿರುವುದಾಗಿ ಹೇಳಿದ್ದಾಳೆ.  ಜೀವನದಲ್ಲಿ ಸ್ವಂತ ಕಾಲಿನ ಮೇಲೆ ನಿಲ್ಲಲಿ ಎಂದು ಮಗುವಿಗೆ ಹೀಗೆ ಮಾಡಿದ್ದಾಗಿ ಹೇಳಿದ್ದಾಳೆ. ಯಾವುದೇ ಕಾರಣಕ್ಕೂ ಇನ್ನು ಮುಂದೆ ಮಗುವನ್ನು ಈ ತಾಯಿಗೆ ಒಪ್ಪಿಸಬೇಡಿ ಎಂದು ಸ್ಥಳೀಯರು ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Mallikarjun Kharge: 11 ವರ್ಷಗಳ ಮೋದಿಯ ತಪ್ಪುಗಳ ಲೆಕ್ಕ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Mangaluru: ಬಾಲ್ಯದ ಕನಸ್ಸಿನಂತೆ ನೌಕಾಪಡೆ ಸೇರಿಕೊಂಡ ಮಂಗಳೂರಿನ ಯುವತಿ

Karnataka Weather: 48 ಗಂಟೆಗಳಲ್ಲಿ ಈ ಭಾಗದಲ್ಲಿ ಭಾರೀ ಮಳೆ, ರೆಡ್ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments