Webdunia - Bharat's app for daily news and videos

Install App

4 ವರ್ಷದ ಮಗನನ್ನು ಮಚ್ಚಿನಿಂದ ಕೊಚ್ಚಿ ಕೊಂದ ತಾಯಿ!

Webdunia
ಮಂಗಳವಾರ, 11 ಜನವರಿ 2022 (08:39 IST)
ಮೈಸೂರು : ತಾಯಿ ಹೆತ್ತ ಮಗನನ್ನೇ ಕೊಚ್ಚಿ ಕೊಲೆಗೈದ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಬೂದನೂರು ಗ್ರಾಮದಲ್ಲಿ ನಡೆದಿದೆ.
 
ತಾಯಿ ಭವಾನಿ ಮಾನಸಿಕ ಅಸ್ವಸ್ಥರಾಗಿದ್ದು, 4 ವರ್ಷದ ಶ್ರೀನಿವಾಸ್ ಎಂಬ ಮಗನನ್ನು ಮಚ್ಚಿನಿಂದ ಕೊಚ್ಚಿ ಹತ್ಯೆಗೈದಿದ್ದಾಳೆ.

ಇತ್ತೀಚೆಗೆ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಭವಾನಿ, ಗಂಡನೊಂದಿಗೆ ಗಲಾಟೆ ಮಾಡಿಕೊಂಡು ಮಗು ಸಹಿತ ತವರು ಮನೆ ಸೇರಿದ್ದಳು. ಪತಿ ಶಂಕರ್ ಸಮಾಧಾನಪಡಿಸಿ ವಾಪಸ್ಸು ಕರೆತಂದಿದ್ದರು.
ಕೆಲಸದ ನಿಮಿತ್ತ ಪತಿ ಹೊರಗಡೆ ಹೋಗಿದ್ದಾಗ ತನ್ನ ಮಗುವನ್ನ ತಾಯಿ ಭವಾನಿ ಕೊಲೆ ಮಾಡಿದ್ದಾಳೆ. ಮಚ್ಚಿನಿಂದ ತಲೆಗೆ ನಾಲ್ಕೈದು ಬಾರಿ ಹೊಡೆದಿದ್ದಾಳೆ.

ವಿಷಯ ತಿಳಿಯುತ್ತಿದ್ದಂತೆ ಪತಿ ಶಂಕರ್ ಗ್ರಾಮಸ್ಥರ ನೆರವಿನಿಂದ ಎಚ್.ಡಿ.ಕೋಟೆಯ ತಾಲೂಕು ಆಸ್ಪತ್ರೆಗೆ ಮಗುವನ್ನು ಸೇರಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಶ್ರೀನಿವಾಸ್ ಮೃತಪಟ್ಟಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments