Webdunia - Bharat's app for daily news and videos

Install App

4 ವರ್ಷದ ಮಗನನ್ನು ಮಚ್ಚಿನಿಂದ ಕೊಚ್ಚಿ ಕೊಂದ ತಾಯಿ!

Webdunia
ಮಂಗಳವಾರ, 11 ಜನವರಿ 2022 (08:39 IST)
ಮೈಸೂರು : ತಾಯಿ ಹೆತ್ತ ಮಗನನ್ನೇ ಕೊಚ್ಚಿ ಕೊಲೆಗೈದ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಬೂದನೂರು ಗ್ರಾಮದಲ್ಲಿ ನಡೆದಿದೆ.
 
ತಾಯಿ ಭವಾನಿ ಮಾನಸಿಕ ಅಸ್ವಸ್ಥರಾಗಿದ್ದು, 4 ವರ್ಷದ ಶ್ರೀನಿವಾಸ್ ಎಂಬ ಮಗನನ್ನು ಮಚ್ಚಿನಿಂದ ಕೊಚ್ಚಿ ಹತ್ಯೆಗೈದಿದ್ದಾಳೆ.

ಇತ್ತೀಚೆಗೆ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಭವಾನಿ, ಗಂಡನೊಂದಿಗೆ ಗಲಾಟೆ ಮಾಡಿಕೊಂಡು ಮಗು ಸಹಿತ ತವರು ಮನೆ ಸೇರಿದ್ದಳು. ಪತಿ ಶಂಕರ್ ಸಮಾಧಾನಪಡಿಸಿ ವಾಪಸ್ಸು ಕರೆತಂದಿದ್ದರು.
ಕೆಲಸದ ನಿಮಿತ್ತ ಪತಿ ಹೊರಗಡೆ ಹೋಗಿದ್ದಾಗ ತನ್ನ ಮಗುವನ್ನ ತಾಯಿ ಭವಾನಿ ಕೊಲೆ ಮಾಡಿದ್ದಾಳೆ. ಮಚ್ಚಿನಿಂದ ತಲೆಗೆ ನಾಲ್ಕೈದು ಬಾರಿ ಹೊಡೆದಿದ್ದಾಳೆ.

ವಿಷಯ ತಿಳಿಯುತ್ತಿದ್ದಂತೆ ಪತಿ ಶಂಕರ್ ಗ್ರಾಮಸ್ಥರ ನೆರವಿನಿಂದ ಎಚ್.ಡಿ.ಕೋಟೆಯ ತಾಲೂಕು ಆಸ್ಪತ್ರೆಗೆ ಮಗುವನ್ನು ಸೇರಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಶ್ರೀನಿವಾಸ್ ಮೃತಪಟ್ಟಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿವಾದಿತ ಪಾರ್ಕ್ ತಿದ್ದುಪಡಿ ಮಸೂದೆ ವಾಪಾಸ್‌: ಹೋರಾಟಕ್ಕೆ ಸಿಕ್ಕ ಜಯ ಎಂದ ವಿಜಯೇಂದ್ರ

ಭಾರತದ ಆರ್ಥಿಕ ಬೆಳವಣಿಗೆ ಜಗತ್ತಿಗೆ ವಿಶ್ವಾಸದ ಮೂಲ: ಪ್ರಧಾನಿ ಮೋದಿ

ಸಮೀಕ್ಷೆಯಲ್ಲಿ ಅಡಚಣೆ, ಗೃಹಜ್ಯೋತಿ ಪರಿಶೀಲನಾ ಗಡುವು ಸೆಪ್ಟೆಂಬರ್ ಅಂತ್ಯದವರೆಗೆ ವಿಸ್ತರಣೆ

ಕರ್ತವ್ಯದಲ್ಲಿದ್ದ ಪಿಎಸ್‌ಐಗೆ ಕಪಾಳಮೋಕ್ಷ, ಎಂಎಲ್‌ಎ ಸುರೇಶ್ ಪುತ್ರಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ನಮ್ಮ ಪಾದಯಾತ್ರೆಗೆ ಬೆಚ್ಚಿಬಿದ್ದು ಸಿಎಂ ವಿಶೇಷ ಅಧಿವೇಶನ ಕರೆದಿದ್ದಾರೆ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments