Webdunia - Bharat's app for daily news and videos

Install App

ಮೀಟರ್ ದಂಧೆ ವಿಚಾರಕ್ಕೆ ತಾಯಿ, ಮಗ ಸಾವು; ಪ್ರಕರಣಕ್ಕೆ ಹೊಸ ತಿರುವು

Webdunia
ಸೋಮವಾರ, 3 ಜೂನ್ 2019 (07:02 IST)
ಬೆಂಗಳೂರು : ಮೀಟರ್ ದಂಧೆ ವಿಚಾರಕ್ಕೆ ತಾಯಿ, ಮಗ  ನೇಣಿಗೆ ಶರಣಾದ ಪ್ರಕರಣ ಇದೀಗ ದೊಡ್ಡ ತಿರುವು ಪಡೆದುಕೊಂಡಿದ್ದು, ತಂದೆಯೇ ಮಗನಿಗೆ ನೇಣು ಹಾಕಿ ಕೊಲೆ ಮಾಡಿರುವುದಾಗಿ ತಿಳಿದುಬಂದಿದೆ.




ಹೆಚ್‍.ಎ.ಎಲ್ ವಿಭೂತಿಪುರ ನಿವಾಸಿ ಗೀತಾಬಾಯಿ (34) ಹಾಗೂ ಮಗ ವರುಣ್ ರಾವ್ (12) ಮೃತರು. 2 ವರ್ಷಗಳ ಹಿಂದೆ ಗೀತಾಬಾಯಿ ಸುಧಾ ಎಂಬುವರ ಬಳಿ 40,000 ರೂ. ಸಾಲ ಪಡೆದುಕೊಂಡು ತೀರಿಸಿದ್ದಾರೆ. ಆದರೂ ಹಣ ನೀಡುವಂತೆ ಸುಧಾ ಮತ್ತು ಆಕೆಯ ಸಹಚರರು ಮನೆಗೆ ಬಂದು ಕಿರುಕುಳ ನೀಡುತ್ತಿದ್ದ ಹಿನ್ನಲೆಯಲ್ಲಿ ಗೀತಾಬಾಯಿ ಹಾಗೂ ಆಕೆಯ ಮಗ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆಕೆಯ ಪತಿ ಸುರೇಶ್ ತಿಳಿಸಿದ್ದು, ಈ ಬಗ್ಗೆ ಹೆಚ್‍.ಎ.ಎಲ್ ಠಾಣೆ ಪೊಲೀಸರಿಗೆ ದೂರು ನೀಡಿದ್ದ.


ಪ್ರಕರಣ ದಾಖಲಿಸಿಕೊಂಡ ಪೊಲೀಸರು ಈ ಬಗ್ಗೆ ತನಿಖೆ ನಡೆಸಿದಾಗ ತಂದೆ ಸುರೇಶ್ ನ ಮೊಬೈಲ್ ನಲ್ಲಿ ಆತನೇ ತನ್ನ ಮಗನಿಗೆ ನೇಣು ಹಾಕಿ ಕೊಲೆ ಮಾಡಿರುವ ದೃಶ್ಯ ಸೆರೆಯಾಗಿದೆ. ಅಲ್ಲದೇ  ಪುತ್ರನ ಸಾವಿನಿಂದ ನೊಂದು ಗೀತಾಬಾಯಿ ನೇಣು ಹಾಕಿಕೊಂಡಿದ್ದಾರೆ ಎಂಬ ವಿಚಾರ ತಿಳಿದುಬಂದಿದ್ದು, ಈ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments