Webdunia - Bharat's app for daily news and videos

Install App

ಮೈಸೂರು: ಇಬ್ಬರು ಮಕ್ಕಳ ಜೊತೆ ತಾಯಿ ಆತ್ಮಹತ್ಯೆ

Webdunia
ಮಂಗಳವಾರ, 28 ಜೂನ್ 2022 (14:43 IST)
ಮುದ್ದು ಮುದ್ದಾದ ಮಕ್ಕಳು, ಮತ್ತೊಂದು ಕಡೆ ತಾನು ಹೆತ್ತು ಸಾಕಿ ಸಲಹಿದ ಮಕ್ಕಳ ಜೊತೆಯಲ್ಲಿ ಶವವಾಗಿ ಮಲಗಿರೊ ತಾಯಿ. ಈ ದೃಶ್ಯ ನೋಡಿದ್ರೆ ಎಂಥವರ ಕರುಳು ಕೂಡ ಕಿತ್ತು ಬರದೆ ಇರಲಾರದು. ಅಂದಹಾಗೆ ಈ ಹೃದಯ ವಿದ್ರಾವಕ ಘಟನೆಗೆ ಸಾಕ್ಷಿಯಾಗಿದ್ದು ಮೈಸೂರು ಜಿಲ್ಲೆ ತಿ.ನರಸೀಪುರ ತಾಲೂಕಿನ ರಾಮೇಗೌಡನಪುರ.
ಅಂದಹಾಗೆ ಇಲ್ಲಿ ಸಾವನ್ನಪ್ಪಿದ ಗೃಹಿಣಿ ಹೆಸ್ರು ಸರೋಜಾ (32)  6 ವರ್ಷದ ಗೀತಾ,  4 ವರ್ಷದ ಕುಸುಮ ಮೃತ ಮಕ್ಕಳು. ಈ ಸರೋಜಾ ಪತಿ ನಿಂಗರಾಜು ಹೊಂದಿದ್ದ ಅನೈತಿಕ ಸಂಬಂಧವೇ ಈ ಮೂವರ ಸಾವಿಗೆ ಕಾರಣವಾಗಿದೆ.
ಸರೋಜಳನ್ನ ತಿ. ನರಸೀಪುರ ತಾಲೂಕಿನ ಮಾವಿನಹಳ್ಳಿ ಗ್ರಾಮದ ನಿಂಗರಾಜುವಿಗೆ ಮದುವೆ ಮಾಡುಕೊಡಲಾಗಿತ್ತು. ಇಬ್ಬರ ದಾಂಪತ್ಯಕ್ಕೆ ಮುದ್ದಾದ ಇಬ್ಬರು ಮಕ್ಕಳು ಕೂಡ ಇದ್ರು. ಅದ್ರೆ ಪತಿ ನಿಂಗರಾಜು ಮೃತ ಸರೋಜ ಳ ಅಣ್ಣನ ಪತ್ನಿ ಜೊತೆ ಅನೈತಿಕ ಸಂಬಂಧ ಹೊಂದಿದ್ದನಂತೆ. ಈ ವಿಚಾರದಲ್ಲಿ ಪತಿ ಪತ್ನಿ ಇಬ್ಬರ ನಡುವೆ ಅಗಾಗ್ಗೆ ಗಲಾಟೆ ನಡೆಯುತ್ತಿತ್ತು.
ಕೆಲ ದಿನಗಳ ಹಿಂದಷ್ಟೇ ಪತಿ ಮನೆ ಬಿಟ್ಟ ಸರೋಜ ತವರು ಮನೆ ರಾಮೇಗೌಡನಪುರಕ್ಕೆ ಬಂದಿದ್ಲು. ನಿನ್ನೆ ಡೆತ್ ನೋಟ್ ಬರೆದಿದ್ದ ಸರೋಜ, ಪತಿ ನಿಂಗರಾಜುವಿನಿಂದ ತನ್ನ ಅಣ್ಣನ ಕುಟುಂಬ ಹಾಳಾಗಿದೆ. ನನ್ನ ಅಣ್ಣನ ಮಕ್ಕಳ ಮುಖ ನೋಡಿದ್ರೆ ತುಂಬಾ ನೋವಾಗುತ್ತೆ. ನಾನು ಸತ್ತ ಬಳಿಕ ನನ್ನ ಮುಖವನ್ನ ನನ್ನ ಗಂಡನಿಗೆ ತೋರಿಸಬೇಡಿ ಎಂದು ಉಲ್ಲೇಖ ಮಾಡಿ ತನ್ನಿಬ್ಬರು ಮಕ್ಕಳನ್ನ ನೇಣಿಗೆ ಹಾಕಿ, ತಾನೂ ನೇಣಿಗೆ ಶರಣಾಗಿದ್ದಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

ಮುಂದಿನ ಸುದ್ದಿ
Show comments