Webdunia - Bharat's app for daily news and videos

Install App

ಮಕ್ಕಳಿಬ್ಬರಿಗೆ ಬೆಂಕಿ ಹಚ್ಚಿ ಆತ್ಮಹತ್ಯೆಗೆ ಯತ್ನಿಸಿದ ತಾಯಿ

Webdunia
ಭಾನುವಾರ, 1 ಮೇ 2016 (12:14 IST)
ಇಬ್ಬರು ಮಕ್ಕಳಿಗೆ ಬೆಂಕಿ ಹಚ್ಚಿದ ತಾಯಿಯೋರ್ವಳು ತಾನು ಕೂಡ ಆತ್ಮಹತ್ಯೆಗೆ ಪ್ರಯತ್ನಿಸಿದ ಘಟನೆ ಕುಣಿಘಲ್ ತಾಲ್ಲೂಕಿನ ಗಾಣಿಮೇಸ್ತ್ರರಪಾಳ್ಯ ಗ್ರಾಮದಲ್ಲಿ ನಡೆದಿದೆ. 
 
ಘಟನೆಗೆ ಕೌಟುಂಬಿಕ ಕಲಹವೇ ಕಾರಣ ಎಂದು ತಿಳಿದು ಬಂದಿದ್ದು ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ಚಂದ್ರಮ್ಮ(26) ಮತ್ತು ಮಕ್ಕಳನ್ನು ಗೌತಮ್ ಮತ್ತು ಧನು ಎಂದು ಗುರುತಿಸಲಾಗಿದೆ. ಮೂವರು ಪ್ರತಿಶತ 50 ರಷ್ಟು ಸುಟ್ಟಗಾಯಗಳಿಂದ ನರಳುತ್ತಿದ್ದಾರೆ.
 
ಚಂದ್ರಮ್ಮ ಪತಿ ಮುದ್ದೆಕೋಲಿನಿಂದ ಹೊಡೆದು ಆಕೆಯ ಕಾಲು ಮುರಿದಿದ್ದ. ಇದರಿಂದ ನೊಂದಿದ್ದ ಚಂದ್ರಮ್ಮ ತನ್ನ ಪುಟ್ಟ ಮಕ್ಕಳಿಬ್ಬರಿಗೂ ಸೀಮೆಎಣ್ಣೆ ಸುರಿದು ತಾನು ಕೂಡ ಸೀಮೆ ಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾಳೆ.
 
ಗಂಭೀರವಾಗಿ ಗಾಯಗೊಂಡಿರುವ ತಾಯಿ-ಮಕ್ಕಳನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಸೇರಿಸಲಾಗಿದ್ದು ಕುಣಿಘಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

 
ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.   

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments