ಇಬ್ಬರು ಮಕ್ಕಳಿಗೆ ಬೆಂಕಿ ಹಚ್ಚಿ ತಾನು ಕೂಡ ಬೆಂಕಿ ಹಚ್ಚಿಕೊಂಡು ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ. ಕುಣಿಘಲ್ ತಾಲ್ಲೂಕಿನ ಗಾಣಿಮೇಸ್ತ್ರರಪಾಳ್ಯ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ.
ಕೌಟುಂಬಿಕ ಕಲಹದಿಂದ ನೊಂದಿದ್ದ ಮಹಿಳೆ ಚಂದ್ರಮ್ಮ(26) ತನ್ನಿಬ್ಬರು ಮಕ್ಕಳಾದ ಗೌತಮ್ ಮತ್ತು ಧನುವಿಗೆ ಬೆಂಕಿ ಹಚ್ಚಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಳು.
ಚಂದ್ರಮ್ಮ ಪತಿ ಮುದ್ದೆಕೋಲಿನಿಂದ ಹೊಡೆದು ಆಕೆಯ ಕಾಲು ಮುರಿದಿದ್ದ. ಇದರಿಂದ ನೊಂದಿದ್ದ ಚಂದ್ರಮ್ಮ ತನ್ನ ಪುಟ್ಟ ಮಕ್ಕಳಿಬ್ಬರಿಗೂ ಸೀಮೆಎಣ್ಣೆ ಸುರಿದು ತಾನು ಕೂಡ ಸೀಮೆ ಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾಳೆ. ತಕ್ಷಣ ಬೆಂಕಿ ನಂದಿಸಿ ಮೂವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಚಂದ್ರಮ್ಮ ಸಾವನ್ನಪ್ಪಿದ್ದಾಳೆ. ಮಕ್ಕಳಿಬ್ಬರ ಸ್ಥಿತಿ ಸಹ ಗಂಭೀರವಾಗಿದ್ದು ಅವರಿಗೆ ಚಿಕಿತ್ಸೆಯನ್ನು ಮುಂದುವರೆಸಲಾಗಿದೆ.
ಕುಣಿಘಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.