Webdunia - Bharat's app for daily news and videos

Install App

ಹೊಸ ಸೋಂಕಿನ ಪರೀಕ್ಷೆಗೆ ಕಡಿಮೆ ದರ ನಿಗದಿ ಮಾಡಲು ಕ್ರಮ

Webdunia
ಸೋಮವಾರ, 6 ಮಾರ್ಚ್ 2023 (21:19 IST)
H3N2 ವೈರಸ್‌ ಸೋಂಕುಗೆ ಸಂಬಂಧಿಸಿದಂತೆ ರಾಜ್ಯದಲ್ಲಿ ಆತಂಕದ ಸ್ಥಿತಿ ನಿರ್ಮಾಣವಾಗಿಲ್ಲ. ಎಲ್ಲಾ ಆಸ್ಪತ್ರೆಗಳ ಆರೋಗ್ಯ ಸಿಬ್ಬಂದಿ ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕೆಂದು ಸೂಚನೆ ನೀಡಿ ಆದೇಶ ಹೊರಡಿಸಲಾಗುವುದು. ಹಾಗೆಯೇ ಜನರು ಮುನ್ನೆಚ್ಚರಿಕೆ ವಹಿಸಲು ಮಾರ್ಗಸೂಚಿ ಬಿಡುಗಡೆ ಮಾಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದರು.ಎಚ್‌3ಎನ್‌2 ವೈರಸ್‌ ಹರಡುತ್ತಿರುವ ಹಿನ್ನೆಲೆಯಲ್ಲಿ, ತಾಂತ್ರಿಕ ಸಮಿತಿ ಹಾಗೂ ಹಿರಿಯ ಅಧಿಕಾರಿಗೊಳೊಂದಿಗೆ ಸಚಿವರು ಸಭೆ ನಡೆಸಿದರು. ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
 
ಇನ್‌ಫ್ಲುಯೆಂಜಗೆ ಪ್ರತಿ ವರ್ಷ ಲಸಿಕೆ ನೀಡುತ್ತಿದ್ದು, ಇದನ್ನು ಎಲ್ಲಾ ಆರೋಗ್ಯ ಸಿಬ್ಬಂದಿ ಪಡೆಯಲು ಲಿಖಿತ ಸೂಚನೆ ನೀಡಲಾಗುವುದು. ಐಸಿಯುನಲ್ಲಿ ಕೆಲಸ ಮಾಡುವವರು ಸೇರಿದಂತೆ ಕೆಲ ನಿರ್ದಿಷ್ಟ ವೈದ್ಯರು, ಸಿಬ್ಬಂದಿಗೆ ಸರ್ಕಾರದಿಂದಲೇ ಲಸಿಕೆ ನೀಡಲಾಗುವುದು. 2019 ರವರೆಗೆ ಈ ಲಸಿಕೆ ನೀಡಲಾಗುತ್ತಿತ್ತು. ಕೋವಿಡ್‌ ಬಂದ ಬಳಿಕ ನೀಡಿಲ್ಲ. ಈಗ ಮತ್ತೆ ಅದನ್ನು 31 ಜಿಲ್ಲೆಗಳಲ್ಲಿ ನೀಡಲಾಗುವುದು ಎಂದು ತಿಳಿಸಿದರು.
 
ಪ್ರತಿ ವಾರ 25 ಪರೀಕ್ಷೆ ಮಾಡಬೇಕೆಂದು ಕೇಂದ್ರ ಸರ್ಕಾರ ಗುರಿ ನೀಡಿದೆ. ಬೆಂಗಳೂರಿನ ವಿಕ್ಟೋರಿಯಾ ಹಾಗೂ ವಾಣಿ ವಿಲಾಸ ಆಸ್ಪತ್ರೆಗಳಲ್ಲಿ ಸಾರಿ ಹಾಗೂ ಐಎಲ್‌ಐ ಪ್ರಕರಣಗಳ ಪೈಕಿ 25 ಮಂದಿಗೆ ಈ ಪರೀಕ್ಷೆ ಮಾಡಿ ಯಾವ ಪ್ರಭೇದದ ವೈರಾಣು ಎಂದು ಪತ್ತೆ ಮಾಡಲಾಗುವುದು ಎಂದರು.
 
15 ವರ್ಷಕ್ಕಿಂತ ಕಡಿಮೆ ವಯೋಮಾನದ ಮಕ್ಕಳಲ್ಲಿ, 65 ವರ್ಷ ಮೇಲ್ಪಟ್ಟ ವೃದ್ಧರಿಗೆ ಈ ಸೋಂಕು ಕಂಡುಬರಬಹುದು. ಗರ್ಭಿಣಿಯರಿಗೂ ಸೋಂಕು ಬರುವ ಸಾಧ್ಯತೆ ಹೆಚ್ಚಿದೆ. ಶುಚಿತ್ವ, ಗುಂಪುಗೂಡುವುದನ್ನು ತಡೆಯುವುದು, ಕೈಗಳ ಸ್ವಚ್ಛತೆ ಮೊದಲಾದ ಕ್ರಮಗಳ ಮೂಲಕ ಸೋಂಕು ಹರಡುವುದನ್ನು ತಡೆಯಬಹುದು ಎಂದರು.
 
ಅನಗತ್ಯವಾಗಿ ಆಂಟಿ ಬಯಾಟಿಕ್‌ ಬೇಡ
 
ಜನವರಿಯಿಂದ ಮಾರ್ಚ್‌ವರೆಗೆ ಎಚ್‌1ಎನ್‌1 ನ 20 ಪ್ರಕರಣಗಳು ಪತ್ತೆಯಾಗಿವೆ. ಎಚ್‌3ಎನ್‌2 ನ 26 ಪ್ರಕರಣ ಪತ್ತೆಯಾಗಿದೆ. ಇನ್‌ಫ್ಲುಯೆಂಜ ಬಿ 10, ಅಡಿನೋ 69 ಪ್ರಕರಣ ಕಂಡುಬಂದಿದೆ. ಅನೇಕರು ಆಂಟಿ ಬಯಾಟಿಕ್‌ ಮಾತ್ರೆಗಳನ್ನು ಸೇವಿಸುತ್ತಿದ್ದಾರೆ. ವೈದ್ಯರ ಸಲಹೆ ಇಲ್ಲದೆ ಔಷಧಿ ಸೇವಿಸುವುದು, ಅನಗತ್ಯವಾಗಿ ಆಂಟಿ ಬಯಾಟಿಕ್‌ ಸೇವಿಸುವುದು ಸರಿಯಲ್ಲ ಎಂದು ತಜ್ಞರು ಹೇಳಿದ್ದಾರೆ. ಇದಕ್ಕೆ ಸಿಂಪ್ಟಮೆಟಿಕ್‌ ಚಿಕಿತ್ಸೆ ನೀಡಲಾಗುತ್ತದೆ. ಅಗತ್ಯ ಔಷಧಿಗಳನ್ನು ದಾಸ್ತಾನು ಮಾಡಲಾಗಿದೆ. ಔಷಧಿಯ ಕೊರತೆ ಇಲ್ಲ ಎಂದು ತಿಳಿಸಿದರು.
 
ಬೇಸಿಗೆಯ ಆರಂಭಕ್ಕೆ ಮುನ್ನವೇ ಫೆಬ್ರವರಿಯಲ್ಲೇ ತಾಪಮಾನ ಹೆಚ್ಚಾಗಿದೆ. ಇದರಿಂದ ಸಮಸ್ಯೆ ಹೆಚ್ಚುತ್ತಿದೆ. ಬೆಳಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆವರೆಗೆ ಬಿಸಿಲಲ್ಲಿ ಓಡಾಡುವುದು ತಪ್ಪಿಸಬೇಕು. ಕನಿಷ್ಠ 2-3 ಲೀಟರ್‌ ನೀರು, ಮಜ್ಜಿಗೆ, ಎಳನೀರು, ಶರಬತ್‌ ಕುಡಿಯುವುದೊಳಿತು. ದೇಹದಲ್ಲಿ ನೀರು ಕಡಿಮೆ ಆಗದಂತೆ ಎಚ್ಚರ ವಹಿಸಬೇಕು ಎಂದು ಸಲಹೆ ನೀಡಿದರು.ಈ ಸೋಂಕು ಬಂದರೆ 2-5 ದಿನದೊಳಗೆ ನಿವಾರಣೆಯಾಗುತ್ತದೆ. ಕೋವಿಡ್‌ಗೊಳಗಾದವರಿಗೆ ಸೋಂಕು ಬಂದರೆ ಹೆಚ್ಚು ಕೆಮ್ಮು ಇರುತ್ತದೆ. ಬೆಂಗಳೂರಿನಲ್ಲಿ ಈ ಸೋಂಕಿನ ಎರಡು ಪ್ರಕರಣಗಳು ಕಂಡುಬಂದಿವೆ ಎಂದರು.
 
ದರ ನಿಯಂತ್ರಣಕ್ಕೆ ಸಮಿತಿ ಹೊಸ ಸೋಂಕು ಪರೀಕ್ಷೆಯ ದರ ನಿಯಂತ್ರಣಕ್ಕೆ ಕಡಿವಾಣ ಹಾಕಲು ಸಮಿತಿ ರಚಿಸಲು ಸೂಚಿಸಲಾಗಿದೆ. ಕಡಿಮೆ ದರದಲ್ಲಿ ಪರೀಕ್ಷೆ ಮಾಡುವಂತೆ ಕ್ರಮ ವಹಿಸಲು ಸೂಚಿಸಲಾಗಿದೆ. ವರದಿ ಬಂದ ಬಳಿಕ ಪರೀಕ್ಷೆಗೆ ದರ ನಿಗದಿ ಮಾಡಲಾಗುವುದು ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments