Daily Horoscope

ಸಂಸದ, ಬಿಜೆಪಿ ಹಿರಿಯ ನಾಯಕ ವಿ ಶ್ರೀನಿವಾಸ್ ಪ್ರಸಾದ್ ನಿಧನ

Krishnaveni K
ಸೋಮವಾರ, 29 ಏಪ್ರಿಲ್ 2024 (08:48 IST)
Photo Courtesy: Twitter
ಬೆಂಗಳೂರು: ಹಿರಿಯ ಬಿಜೆಪಿ ನಾಯಕ, ಚಾಮರಾಜನಗರ ಮೀಸಲು ಕ್ಷೇತ್ರದ ಸಂಸದ ವಿ ಶ್ರೀನಿವಾಸ್ ಪ್ರಸಾದ್ ಅನಾರೋಗ್ಯದಿಂದಾಗಿ ನಿಧನರಾಗಿದ್ದಾರೆ.

ಅವರಿಗೆ 76 ವರ್ಷ ವಯಸ್ಸಾಗಿತ್ತು. ಇತ್ತೀಚೆಗೆ ಕೆಲವು ದಿನಗಳಿಂದ ಅವರು ಅನಾರೋಗ್ಯಪೀಡಿರಾಗಿದ್ದರು. ಇದೀಗ ಹೃದಯಾಘಾತಕ್ಕೊಳಗಾಗಿದ್ದಾರೆ ಎಂದು ತಿಳಿದುಬಂದಿದೆ. ಇತ್ತೀಚೆಗಷ್ಟೇ ಬಿಜೆಪಿ ಜೊತೆ ಮುನಿಸಿಕೊಂಡಿದ್ದ ಶ್ರೀನಿವಾಸ್ ಪ್ರಸಾದ್ ರಾಜಕೀಯ ನಿವೃತ್ತಿ ಪಡೆದಿದ್ದರು.

ಬೆಂಗಳೂರು ಓಲ್ಡ್ ಏರ್ ಪೋರ್ಟ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು. ಬಹುಅಂಗಾಂಗ ವೈಫಲ್ಯ ಮತ್ತು ಹೃದಯಾಘಾತದಿಂದಾಗಿ ಅವರು ಸಾವನ್ನಪ್ಪಿದ್ದಾರೆ ಎಂದು ಅವರ ಪುತ್ರಿ ಪೂರ್ಣಿಮಾ ಮಾಹಿತಿ ನೀಡಿದ್ದಾರೆ. ಅವರಿಗೆ ಮೂವರು ಹೆಣ್ಣು ಮಕ್ಕಳಿದ್ದಾರೆ.

ಈ ಬಾರಿಯೂ ಅವರು ಚಾಮರಾಜನಗರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಅವರಿಗೆ ಟಿಕೆಟ್ ಸಿಕ್ಕಿರಲಿಲ್ಲ. ಹೀಗಾಗಿ ಅವರು ಮುನಿಸಿಕೊಂಡಿದ್ದರು. ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದು ಸುದ್ದಿಯಾಗಿತ್ತು. ರಾಜ್ಯ ಬಿಜೆಪಿ ಘಟಕ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದೆ. ಶ್ರೀನಿವಾಸ್ ಪ್ರಸಾದ್ ಪ್ರಭಾವೀ ದಲಿತ ನಾಯಕರಾಗಿದ್ದರು. ಅವರ ನಿಧನದಿಂದ ದಲಿತ ಸೂರ್ಯ ಮುಳುಗಿದಂತಾಗಿದೆ ಎಂದು ಬಿಜೆಪಿ ಬಣ್ಣಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments