Webdunia - Bharat's app for daily news and videos

Install App

ಲೋಕಸಭೆ ಅಭ್ಯರ್ಥಿ ಹೆಸರು ಜಯಮಾಲಾ ಘೋಷಣೆ ಮಾಡಿದ್ಯಾಕೆ?

Webdunia
ಗುರುವಾರ, 7 ಮಾರ್ಚ್ 2019 (15:38 IST)
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಯಾರು ಯಾರು ಸ್ಪರ್ಧೆ ಮಾಡಲಿದ್ದಾರೆ. ಆಕಾಂಕ್ಷಿಗಳು ಯಾರು ಯಾರು ಅಂತ ಹೆಸರುಗಳನ್ನು ಸಚಿವೆ ಜಯಮಾಲಾ ಬಹಿರಂಗಪಡಿಸಿದ್ದಾರೆ.

ಉಡುಪಿ- ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಪಕ್ಷದಿಂದ ನಾಲ್ವರು ಆಕಾಂಕ್ಷಿಗಳ ಹೆಸರುಗಳನ್ನು ಜಿಲ್ಲಾ ಉಸ್ತುವಾರಿ ಸಚಿವೆ ಜಯಮಾಲ ಉಡುಪಿಯಲ್ಲಿ ಬಹಿರಂಗಪಡಿಸಿದ್ದಾರೆ.

ಮಣಿಪಾಲದ ಜಿಪಂ ಸಭಾಂಗಣದಲ್ಲಿ  ನಡೆದ ತ್ರೈಮಾಸಿಕ ಕೆಡಿಪಿ ಸಭೆಯ ಬಳಿಕ  ಸಚಿವೆ ಜಯಮಾಲಾ, ಸುದ್ದಿಗಾರರು ಕೇಳಿದ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿ ಮಾತನಾಡಿದ್ರು. ಲೋಕಸಭಾ ಚುನಾವಣೆಗೆ ನಮ್ಮ ಪಕ್ಷದಿಂದ ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ, ಪ್ರಮೋದ್ ಮಧ್ವರಾಜ್, ರಾಜ್ಯ ಎನ್‌ಆರ್‌ಐ ಸೆಲ್‌ನ ಅಧ್ಯಕ್ಷೆ ಆರತಿ ಕೃಷ್ಣ ಹಾಗೂ ಚಿಕ್ಕಮಗಳೂರು ಡಿಸಿಸಿ ಅಧ್ಯಕ್ಷ ಡಾ.ವಿಜಯ ಕುಮಾರ್ ಈ ನಾಲ್ಕು ಮಂದಿ ಸ್ಪರ್ಧಾಕಾಂಕ್ಷಿಗಳ ರೇಸ್‌ನಲ್ಲಿದ್ದಾರೆ. ಅಂತಿಮವಾಗಿ ಯಾರು ಸ್ಪರ್ಧಿಸಬೇಕೆನ್ನುವುದನ್ನು ಪಕ್ಷದ ವರಿಷ್ಠರು ನಿರ್ಧರಿಸುತ್ತಾರೆ ಎಂದರು.

ಲೋಕಸಭಾ ಚುನಾವಣೆಯ ಸ್ಪರ್ದೆಯಲ್ಲಿ  ತಮ್ಮ ಹೆಸರು ಕೇಳಿ ಬರುತ್ತಿದೆ ಎಂಬ ಪತ್ರಕರ್ತರ ಪ್ರೆಶ್ನೆಗೆ ಪ್ರತಿಕ್ರಿಯಿಸಿದ ಅವರು, ಪಕ್ಷ ನನಗೆ ಎಲ್ಲವನ್ನೂ ನೀಡಿದೆ. ಪಕ್ಷದ ಬಗ್ಗೆ ನಾನು ಯಾವಗಲೂ ಅಭಾರಿ. ನಾನು ಲೋಕಸಭಾ  ಟಿಕೇಟ್ ಅಕಾಂಕ್ಷಿ ಅಲ್ಲ. ಪಕ್ಷ ಟಿಕೇಟು ನೀಡೋ ತೀರ್ಮಾನ ಮಾಡಿದರೆ ಅಮೇಲೆ ಯೋಚನೆ ಮಾಡ್ತೇನೆ ಎಂದ್ರು.

ಉಡುಪಿಯ ಬಿಜೆಪಿ ಪಕ್ಷದಲ್ಲಿರುವ ಗೊಂದಲ, ಹಾಲಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ನಡೆಯುತ್ತಿರುವ ‘ಗೋ ಬ್ಯಾಕ್ ಶೋಭಾ’ ಅಭಿಯಾನದ ಕುರಿತು ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಜಯಮಾಲ, ಅವರ ಜಗಳದಿಂದ ನಾವು ಲಾಭ ಪಡೆಯಬೇಕಿಲ್ಲ. ಬಿಜೆಪಿ ಪಕ್ಷ ಮಾಡಿರುವ, ಮಾಡುತ್ತಿರುವ ತಪ್ಪೇ ಕಾಂಗ್ರೆಸ್ಸಿಗೆ ಈ ಬಾರಿ ಚುನಾವಣೆಯಲ್ಲಿ ಲಾಭ ತರಲಿದೆ ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟಾಕ್ಸಿಕ್ ಸಿನಿಮಾ ವಾವ್ ಎಂದ ಉಪೇಂದ್ರಗೆ ಇದಕ್ಕಿಂತ ಕೆಡಿ, ಕಬ್ಜ ಉತ್ತಮ ಎಂದ ನೆಟ್ಟಿಗರು

ಮೋದಿ ತಮ್ಮ ನಿವಾಸದಲ್ಲಿ ರಕ್ಷಾ ಬಂಧನ, ಮಳಿಗೆ 'ಹೈ-ಫೈವ್' ಕೊಟ್ಟು ನಗು ಹಂಚಿದ ಪ್ರಧಾನಿ

ಸಿಎಂ ಯೋಗಿ ಪೋಸ್ಟರ್ ಸುಡಲು ಹೋದ ಎಸ್ ಪಿ ಕಾರ್ಯಕರ್ತರು: ಸಡನ್ ಎಂಟ್ರಿ ಕೊಟ್ಟ ಪೊಲೀಸ್ ಅಧಿಕಾರಿ ಮಾಡಿದ್ದೇನು Video

ಬರೋಬ್ಬರಿ 6 ವರ್ಷದ ಬಳಿಕ ಶಾಸಕ ವಿನಯ್ ಕುಲಕರ್ಣಿ ಧಾರವಾಡಕ್ಕೆ

ಭೀಕರ ಜಲಪ್ರಳಯಯ ಬೆನ್ನಲ್ಲೇ ನೇಪಾಳದಲ್ಲಿ ಮತ್ತೆ ಪ್ರವಾಹ ಭೀತಿ: ಸೇನಾ ರಕ್ಷಣಾ ಕಾರ್ಯಾಚರಣೆ ತಾತ್ಕಾಲಿಕ ಸ್ಥಗಿತ

ಮುಂದಿನ ಸುದ್ದಿ
Show comments