Select Your Language

Notifications

webdunia
webdunia
webdunia
webdunia

ಸಂಸದ ಡಿ.ಕೆ.ಸುರೇಶ್ ಕಿರುಕುಳ: ಸಿಎಂಗೆ ದೂರು ನೀಡಿದ ಕಾಂಗ್ರೆಸ್ ಕಾರ್ಯಕರ್ತೆ

ಸಂಸದ ಡಿ.ಕೆ.ಸುರೇಶ್ ಕಿರುಕುಳ: ಸಿಎಂಗೆ ದೂರು ನೀಡಿದ ಕಾಂಗ್ರೆಸ್ ಕಾರ್ಯಕರ್ತೆ
ಬೆಂಗಳೂರು , ಬುಧವಾರ, 14 ಸೆಪ್ಟಂಬರ್ 2016 (11:51 IST)
ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ತಮಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತೆ ಶಶಿಕಲಾ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ದೂರು ಸಲ್ಲಿಸಿದ್ದಾರೆ.
 
ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಗೆ ತೆರಳಿದ ಕಾರ್ಯಕರ್ತೆ ಶಶಿಕಲಾ,  ಆರ್‌.ಆರ್.ನಗರದ ಭೂ ವಿವಾದಕ್ಕೆ ಸಂಬಂಧಿಸಿದಂತೆ ಸಂಸದರು ತಮಗೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ. ಇದರಿಂದ ನನ್ನ ಕುಟುಂಬ ನೋವು ಅನುಭವಿಸುತ್ತಿದೆ ಎಂದು ಆರೋಪಿಸಿ ಮುಖ್ಯಮಂತ್ರಿಯವರಿಗೆ ದೂರು ನೀಡಿದ್ದಾರೆ.
 
ತಮ್ಮ ಕುಟುಂಬದ ಐವರು ಸದಸ್ಯರನ್ನು ಪೊಲೀಸರು ಬಂಧಿಸಿದ್ದಾರೆ. ಅವರ ಬಿಡುಗಡೆಗಾಗಿ ಪೊಲೀಸ್ ಠಾಣೆಗೆ ತೆರಳಿದರೇ ಸಂಸದರಿಂದ ಹೇಳಿಸಿ ಆವಾಗ ಬಿಡುಗಡೆ ಮಾಡುತ್ತೇವೆ ಎಂದು ಪೊಲೀಸರು ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಶಶಿಕಲಾ ಮುಖ್ಯಮಂತ್ರಿ ಸಿದ್ದರಾಮಯ್ಯರ ಬಳಿ ಅಳಲು ತೋಡಿಕೊಂಡು ಕಣ್ಣೀರು ಹಾಕಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಪ್ರೀತಿಸು ಎಂದು ಪೀಡಿಸಿದ್ದಕ್ಕೆ ಆತ್ಮಹತ್ಯೆ!