ನನ್ನ ಕ್ಷೇತ್ರಕ್ಕೆ ಮೇಯರ್ ಸ್ಥಾನ ಸಿಗಬೇಕು, ನನ್ನ ಸಹನೆಯ ಕಟ್ಟೆ ಒಡೆದಿದೆ: ಡಿ.ಕೆ. ಸುರೇಶ್ ಖಡಕ್ ವಾರ್ನಿಂಗ್

Webdunia
ಬುಧವಾರ, 20 ಸೆಪ್ಟಂಬರ್ 2017 (12:21 IST)
ಕಾಂಗ್ರೆಸ್`ನಲ್ಲಿ ನಮ್ಮನ್ನ ಕಡೆಗಣಿಸಲಾಗುತ್ತಿದೆ. ಅಭಿವೃದ್ಧಿ ಮತ್ತು ಅಧಿಕಾರ ಹಂಚಿಕೆಯಲ್ಲಿ ನಮ್ಮ ಕ್ಷೇತ್ರವನ್ನ ಕಡೆಗಣಿಸಲಾಗುತ್ತಿದೆ ಎಂದು ಸಂಸದ ಡಿ.ಕೆ. ಸುರೇಶ್ ಸುದ್ದಿಗೋಷ್ಠಿ ನಡೆಸಿ ಅಸಮಾಧಾನವನ್ನ ವ್ಯಕ್ತಪಡಿಸಿದ್ದಾರೆ.

ಎರಡು ಬಾರಿ ಬೆಂಗಳೂರು ಮೇಯರ್ ಆಯ್ಕೆ ನಡೆದಿದ್ದು, ನಮ್ಮನ್ನ ಕಡೆಗಣಿಸಲಾಗಿದೆ. ಈ ಬಾರಿ ನಮ್ಮನ್ನ ಕಡೆಗಣಿಸಬಾರದು. ನನ್ನ ಕ್ಷೇತ್ರಕ್ಕೆ ಮೇಯರ್ ಸ್ಥಾನ ನೀಡಬೇಕು. ಮೇಯರ್ ಆಯ್ಕೆಗೆ ನಡೆದ ಸಭೆಗೆ ನನ್ನನ್ನ ಆಹ್ವಾನಿಸಿರಲಿಲ್ಲ. ನನ್ನನ್ನ ಆಹ್ವಾನ ನೀಡಿದ್ದರೆ ಇವತ್ತು ಸುದ್ದಿಗೋಷ್ಠಿ ನಡೆಸುತ್ತಿರಲಿಲ್ಲ. ನನ್ನ ಸಹನೆಯ ಕಟ್ಟೆ ಒಡೆಯುತ್ತಿದೆ. ಸೀನಿಯಾರಿಟಿ ಆಧಾರದ ಮೇಲೆ ಮೇಯರ್ ಸ್ಥಾನ ಕೇಳುತ್ತಾರೆ. ಅಭಿವೃದ್ಧಿ ವಿಷಯದಲ್ಲಿ ಯಾವುದೇ ಸೀನಿಯಾರಿಟಿ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮೇಯರ್ ಆಯ್ಕೆ ಸಭೆಗೆ ನನ್ನನ್ನ ಆಹ್ವಾನಿಸಿಲ್ಲ. ಇದು ಪಕ್ಷಕ್ಕೆ ನನ್ನ ನೇರ ಸಂದೇಶ. ಅಭಿವೃದ್ಧಿ ಮತ್ತು ಅಧಿಕಾರ ಹಂಚಿಕೆ ವಿಷಯದಲ್ಲಾಗುತ್ತಿರುವ ತಾರತಮ್ಯದ ಬಗ್ಗೆ ಅಸಮಾಧಾನವಿದೆ. ನಮ್ಮ ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ವೇಲು ನಾಯಕ್, ಆಂಜಿನಪ್ಪ ಇದ್ದಾರೆ. ಅವರಲ್ಲಿ ಒಬ್ಬರನ್ನ ಆಯ್ಕೆ ಮಾಡಿ. ಈ ಭಾಗದಲ್ಲಿರುವ 4 ಸಂಸದರ ಪೈಕಿ ನಾನೊಬ್ಬನೇ ಕಾಂಗ್ರೆಸ್ ಸಂಸದ. ನನ್ನನ್ನ ಕಡೆಗಣಿಸಬಾರದು. ನಾನು ಇದ್ದೇನೆ ಎಂಬುದನ್ನ ನಾಯಕರು, ಜನರಿಗೆ ತಿಳಿಸಬೇಕಿದೆ ಎಂದು ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ. ಸುರೇಶ್ ಅಸಮಾಧಾನ ಹೊರ ಹಾಕಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಗೆಲ್ಲುತ್ತಿದ್ದಂತೇ ಕಾರ್ಯಕರ್ತರಿಗೆ ಮುಂದಿನ ನಾಲ್ಕು ಟಾರ್ಗೆಟ್ ನೀಡಿದ ಪ್ರಧಾನಿ ಮೋದಿ

ಸಾಲುಮರದ ತಿಮ್ಮಕ್ಕನ ಕೊನೆಯ ಆಸೆ ಈಡೇರಿಸಲು ಮುಂದಾದ ಸಿಎಂ ಸಿದ್ದರಾಮಯ್ಯ

ಬಿಹಾರದಲ್ಲಿ ಕೇವಲ 2 ಸ್ಥಾನದಲ್ಲಿ ಮುನ್ನಡೆ, ರಾಹುಲ್ ಗಾಂಧಿಗೆ ಇದು 95 ನೇ ಸೋಲು

ಬಿಜೆಪಿಗೆ ನೆಹರೂ, ಗಾಂಧೀಜಿಯನ್ನು ತೆಗಳುವುದೇ ಕೆಲಸ: ಸಿದ್ದರಾಮಯ್ಯ

ಬಿಹಾರ ಚುನಾವಣೆ ಗೆದ್ದಿದ್ದಕ್ಕೆ ಲಾಡು ಹಂಚಿ ಥಕಥೈ ಕುಣಿದ ಕರ್ನಾಟಕ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments