Webdunia - Bharat's app for daily news and videos

Install App

ಎಂಪಿ ಚುನಾವಣೆ: ಬಿಜೆಪಿ ನಾಯಕರ ಮಹತ್ವದ ಸಭೆ

Webdunia
ಸೋಮವಾರ, 24 ಡಿಸೆಂಬರ್ 2018 (17:37 IST)
ರಾಜ್ಯದ ಮೈತ್ರಿ ಸರಕಾರದ ಸಚಿವ ಸಂಪುಟ ವಿಸ್ತರಣೆಯಾಗಿ ಕೈ ಪಾಳೆಯದಲ್ಲಿ ಅಸಮಾಧಾನ, ಅತೃಪ್ತಿ ಸ್ಫೋಟಗೊಂಡಿರುವ ಬೆನ್ನಲ್ಲೆ ಬಿಜೆಪಿ ನಾಯಕರು ಮಹತ್ವದ ಸಭೆ ನಡೆಸಿದ್ದಾರೆ.

ಬಿಜೆಪಿ ಮುಖಂಡರು ಆಪರೇಷನ್ ಕಮಲಕ್ಕೆ ತಯಾರಿ ನಡೆಸಿದ್ದಾರೆ ಎಂಬ ಗಾಳಿ ಸುದ್ದಿಗಳು ಹರಿದಾಡುತ್ತಿರುವಾಗಲೇ ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳದ ಬಿಜೆಪಿ ನಾಯಕರು ಲೋಕಸಭಾ ಚುನಾವಣೆಯ ಸಿದ್ದತೆಯಲ್ಲಿ ತೊಡಗಿದ್ದಾರೆ.

ರಾಜ್ಯ ಬಿಜೆಪಿ ಕಚೇರಿಯಲ್ಲಿ ಪ್ರತಿ ಲೋಕಸಭಾ ಕ್ಷೇತ್ರಗಳ ಸಿದ್ದತೆ ಬಗ್ಗೆ ರಾಜ್ಯ ಬಿಜೆಪಿ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಸರಣಿ ಸಭೆಗಳು ಆರಂಭವಾಗಿವೆ.  ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ ಹಾಗೂ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣಾ ಸಿದ್ದತೆಗಳ ಬಗ್ಗೆ ಸಭೆ ನಡೆಯಿತು.
ಮುಂದಿನ ಲೋಕಸಭಾ ಚುನಾವಣೆಗೆ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುವಂತಾಗಲು ರೂಪಿಸಬೇಕಾದ ಕಾರ್ಯತಂತ್ರಗಳ ಬಗ್ಗೆ ಸಭೆಯಲ್ಲಿ ನಾಯಕರುಗಳು ಚರ್ಚೆ ನಡೆಸಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments