ಹುತಾತ್ಮ ಯೋಧನಿಗೆ ಅಂತಿಮ ನಮನ ಸಲ್ಲಿಸದ ಸಂಸದ - ಸಿ.ಎಂ.ಇಬ್ರಾಹಿಂ ಟೀಕೆ

Webdunia
ಸೋಮವಾರ, 28 ಫೆಬ್ರವರಿ 2022 (21:11 IST)
ಮಾಜಿ ಕೇಂದ್ರ ಸಚಿವ ಮತ್ತು ಕಾಂಗ್ರೆಸ್ ಮುಖಂಡ ಸಿಎಂ ಇಬ್ರಾಹಿಂ   ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಸುಂಟಿಕೊಪ್ಪ ದ ಇಸಾಕ್ ಖಾನ್   ಮನೆಗೆ  ಭೇಟಿ ನೀಡಿದರು.
  ಕೊಡಗು ದೇಶದ ರಕ್ಷಣೆಗೆ ಮುಡಿಪಾಗಿಟ್ಟಿರುವ ನಾಡು ಈ ಜಿಲ್ಲೆಯಿಂದ ಬಹಳಷ್ಟು ಮಂದಿ ದೇಶಕ್ಕಾಗಿ ತಮ್ಮನ್ನು ತಾವು ತೊಡಗಿಸಿಕೊಂಡಿರುವುದು ಹೆಮ್ಮೆಯ ವಿಷಯ ಎಂದು  ಈ ಸಂದಭ೯ ಇಬ್ರಾಹಿಂ ಹೇಳಿದರು.
 ಫೆಬ್ರವರಿ 25ರಂದು ಮೃತಪಟ್ಟ ಹುತಾತ್ಮ ಯೋಧ ಅಲ್ತಾಫ್ ಮನೆಗೆ   ಸಂಸದ ಪ್ರತಾಪ್ ಸಿಂಹ ಭೇಟಿ ನೀಡದ ಬಗ್ಗೆ ಅಸಮಧಾನ ವ್ಯಕ್ತಪಡಿಸಿದ ಇಬ್ರಾಹಿಂ , ಸಂಸದ ಪ್ರತಾಪ್ ಸಿಂಹ ಅವರು ಸಂಸದರಾಗಿರುವ ಬಗ್ಗೆಯೇ ಸಂಶಯವಿದ್ದು ಪತ್ರಿಕೆಯಿಂದ ಅನಿರೀಕ್ಷಿತವಾಗಿ ರಾಜಕೀಯಕ್ಕೆ ಬಂದ ಪರಿಣಾಮ ಈ ರೀತಿಯಾಗಿದೆ  ದಯೆ ಧರ್ಮ ಮಾನವಿತೆಯ ಬಗ್ಗೆ  ಅವರು ಮೊದಲು ತಿಳಿಯಲಿ ಎಂದರು.
 ಕುಂಕುಮ  , ನಮಾಜ್ ಮಾಡಿದರೆ ಮಾತ್ರ ಧರ್ಮವಲ್ಲ ಅದರ ಬದಲಾಗಿ ದಯೆ ಅನುಕಂಪ ಕಷ್ಟದಲ್ಲಿರುವವರಿಗೆ ಸಹಾಯ ಮಾಡುವುದೇ ನಿಜವಾದ ಧರ್ಮ ಎಂಬುದು ಎಲ್ಲರಿಗೂ ತಿಳಿಯಲಿ ಎಂದೂ ಇಬ್ರಾಹಿಂ ಅಭಿಪ್ರಾಯಪಟ್ಟರು.
 ಶಿವಮೊಗ್ಗದಲ್ಲಿ   ಗಲಭೆ ಸಂದರ್ಭ ಆಸ್ತಿ-ಪಾಸ್ತಿ ಹಾನಿ ಮಾಡಲು ಪ್ರೇರಣೆ ನೀಡಿದ ನಾಯಕರ ಆಸ್ತಿಗಳನ್ನು ಸರ್ಕಾರ ಕೂಡಲೇ ಜಪ್ತಿ ಮಾಡಲಿ ಎಂದು  ಒತ್ತಾಯಿಸಿದ ಇಬ್ರಾಹಿಂ  ಹಿಜಬ್ ವಿಚಾರದಲ್ಲಿ ನ್ಯಾಯಾಲಯದ ತೀರ್ಪಿಗೆ ನಾವೆಲ್ಲರೂ ಬದ್ಧರಾಗಿರುತ್ತೇವೆ ಎಂದು  ಹೇಳಿದರು. ಜೆಡಿಎಸ್ ಜಿಲ್ಲಾಧ್ಯಕ್ಷ ಕೆಎಂಬಿ ಗಣೇಶ್ ಮುಖಂಡ ನಾಪಂಡ ಮುತ್ತಪ್ಪ ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷ  ಕರೀಂ, ಮಡಿಕೇರಿಯ ಸುನಿಲ್, ಯೂಸುಫ್  ಕೊಂಡಂಗೇರಿ, ಮಡಿಕೇರಿ ನಗರಸಭೆ ಮುಸ್ತಪ್ಪ, ಸುಂಟಿಕೊಪ್ಪ ಜಮಾಹತ್ ಅಧ್ಯಕ್ಷ ಅಬ್ದುಲ್ಲಾ  ಇದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೌರಾಯುಕ್ತೆಗೆ ಧಮ್ಕಿ ಪ್ರಕರಣ, ಕೊನೆಗೂ ಕೈ ನಾಯಕ ರಾಜೀವ್ ಗೌಡ ಲಾಕ್‌

ಕರ್ನಾಟಕ ಬಾಂಗ್ಲಾ ನಿವಾಸಿಗಳ ತವರೂರು: ಅವರನ್ನು ಓಡಿಸಲು ಎಸ್‌ಐಆರ್ ಜಾರಿಗೊಳಿಸಲು ಯತ್ನಾಳ್ ಒತ್ತಾಯ

ಬಾಹ್ಯಾಕಾಶದಲ್ಲಿ ಭಾರತದ ಪತಾಕೆ ಹಾರಿಸಿದ ಗಗನಯಾತ್ರಿ ಶುಭಾಂಶು ಶುಕ್ಲಾಗೆ ಅಶೋಕ ಚಕ್ರ ಗೌರವ

ಮನರೇಗಾ ಉಳಿಸಲು ರಾಜಭವನ ಚಲೊ: ಕೇಂದ್ರ ಸರ್ಕಾರದ ವಿರುದ್ಧ ತೊಡೆತಟ್ಟಿದ ಡಿಕೆಶಿ

ಗಣತಂತ್ರ ವ್ಯವಸ್ಥೆಗೆ ಪವಿತ್ರ ಸಂವಿಧಾನವೇ ಅಧಿಪತಿ: ಕೆಪಿಸಿಸಿ ಕಚೇರಿಯಲ್ಲಿ ಡಿ.ಕೆ. ಶಿವಕುಮಾರ್‌

ಮುಂದಿನ ಸುದ್ದಿ
Show comments