Webdunia - Bharat's app for daily news and videos

Install App

ಎಂ.ಪಿ. ಕುಮಾರಸ್ವಾಮಿ ಸಂದರ್ಭಕ್ಕೊಂದು ಮಾತನಾಡ್ತಾರೆ : ಸಿ.ಟಿ ರವಿ

Webdunia
ಶುಕ್ರವಾರ, 14 ಏಪ್ರಿಲ್ 2023 (13:17 IST)
ಚಿಕ್ಕಮಗಳೂರು : ಎಂ.ಪಿ. ಕುಮಾರಸ್ವಾಮಿ ಸಂದರ್ಭಕ್ಕೊಂದು ಮಾತನಾಡುತ್ತಾರೆ. ಬಿಜೆಪಿಯಲ್ಲಿ ಯಾರೂ ಸಿ.ಟಿ.ರವಿಯನ್ನು ನೆಚ್ಚಿಕೊಂಡಿಲ್ಲ, ಬಿಜೆಪಿ ಸಿದ್ಧಾಂತವನ್ನು ನೆಚ್ಚಿಕೊಂಡಿದೆ ಎಂದು ಮೂಡಿಗೆರೆ ಶಾಸಕ ಎಂ.ಪಿ ಕುಮಾರಸ್ವಾಮಿ ವಿರುದ್ಧ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಕಿಡಿಕಾರಿದರು.

ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ಹಿಂದೆ ಬಿಜೆಪಿ ಎಂ.ಪಿ ಕುಮಾರಸ್ವಾಮಿ ಅವರಿಗೆ 5 ಬಾರಿ ಟಿಕೆಟ್ ನೀಡಿದೆ. ನಾನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಆಗುವುದರಿಂದ ಈ ರೀತಿ ಹೇಳುತ್ತಾರೆ. ಪಾರ್ಟಿ ಟಿಕೆಟ್ ವಿಥ್ ಡ್ರಾ ಮಾಡುವುದು ಮಾತ್ರ ಕೆಲಸವಲ್ಲ, ಪಾರ್ಟಿ ತುಂಬಬೇಕು ಎಂದರು.

ಕುಮಾರಸ್ವಾಮಿ, ಜೀವರಾಜ್, ನನ್ನನ್ನು ಸೈದ್ಧಾಂತಿಕ ಬದ್ಧತೆ ಕಾರಣಕ್ಕೆ ಗೆಲ್ಲಿಸಿದರು. ಮೂಡಿಗೆರೆಯಲ್ಲಿ ಬಿಜೆಪಿ ಬಲವಾಗಿದೆ ಗೆಲ್ಲಿಸುತ್ತೇವೆ. ಕುಮಾರಸ್ವಾಮಿ ಸಂದರ್ಭಕ್ಕೊಂದು ಮಾತನಾಡುತ್ತಾರೆ. ನಿನ್ನೆ ನನ್ನ ಮನೆಗೆ ಬಂದು ಹೊಗಳಿ ಹೋಗಿದ್ದರು. ಈಗ ಹೀಗೆ ಮಾತನಾಡ್ತಾರೆ. ನಾಳೆ ಏನ್ ಮಾತನಾಡ್ತಾರೆ ನೋಡೋಣ ಎಂದು ವಾಗ್ದಾಳಿ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರ್ನಾಟಕದಲ್ಲಿ ಇಂದು ಹೇಗಿರಲಿದೆ ಹವಾಮಾನ

ದೀಪಾವಳಿಗೆ ದೇಶದ ಜನತೆಗೆ ದೊಡ್ಡ ಗಿಫ್ಟ್ ಘೋಷಿಸಿದ ಮೋದಿ

ಪ್ರಧಾನಿ ಮೋದಿ ಸ್ವಾತಂತ್ರ್ಯೋತ್ಸವ ಭಾಷಣ: ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ

ಜಮ್ಮು ಕಾಶ್ಮೀರ ಮೇಘಸ್ಫೋಟದಲ್ಲಿ 33ಮಂದಿ ಸಾವು: ಅತ್ಯಂತ ದುರಂತ ಸುದ್ದಿ, ದ್ರೌಪದಿ ಮುರ್ಮು

79ನೇ ಸ್ವಾತಂತ್ರ್ಯ ದಿನಾಚರಣೆ: ನಾಳೆ ರಾಷ್ಟ್ರ ರಾಜಧಾನಿ ಹವಾಮಾನದಲ್ಲಿ ಭಾರೀ ಬದಲಾವಣೆ

ಮುಂದಿನ ಸುದ್ದಿ
Show comments