ಎಂಪಿ ಚುನಾವಣೆ: ಬಿಎಸ್ವೈಗೆ ದೆಹಲಿಗೆ ಬುಲಾವ್

Webdunia
ಮಂಗಳವಾರ, 8 ಜನವರಿ 2019 (18:42 IST)
ಲೋಕಸಭಾ ಚುನಾವಣೆಯ ಸಿದ್ಧತೆ ನಡೆಸುವುದು, ಕಾರ್ಯತಂತ್ರ ರೂಪಿಸುವುದು ಹಾಗೂ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಜತೆ ಚರ್ಚೆ ನಡೆಸಲು ಬರುವಂತೆ ಬಿ.ಎಸ್.ಯಡಿಯೂರಪ್ಪನವರಿಗೆ ಪಕ್ಷದಿಂದ ಬುಲಾವ್ ಬಂದಿದೆ.

ಲೋಕಸಭಾ ಚುನಾವಣೆಯ ಸಿದ್ಧತೆ ಬಗ್ಗೆ ಚರ್ಚೆ ನಡೆಸಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರವರ ಬುಲಾವ್ ಮೇರೆಗೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ದೆಹಲಿಗೆ ತೆರಳಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ  ತುಮಕೂರಿನಲ್ಲಿ ಲೋಕಸಭಾ ಚುನಾವಣೆ ಸಿದ್ಧತೆಯ ಸಭೆಯಲ್ಲಿ ಪಾಲ್ಗೊಳ್ಳಬೇಕಿತ್ತು. ಕೊನೆ ಸಮಯದಲ್ಲಿ ಅಮಿತ್ ಶಾ ರವರ ಪ್ರವಾಸ ರದ್ದಾಗಿದೆ. ಹೀಗಾಗಿ ಯಡಿಯೂರಪ್ಪನವರಿಗೆ ದೆಹಲಿಗೆ ಬರುವಂತೆ ಅಮಿತ್ ಶಾ ದಿಢೀರ್ ಬುಲಾವ್ ಕಳುಹಿಸಿದ್ದು, ಯಡಿಯೂರಪ್ಪನವರು ತೆರಳಿದ್ದಾರೆ.

ಯಡಿಯೂರಪ್ಪನವರ ಜತೆ ಶಿವಮೊಗ್ಗ ಸಂಸದ ರಾಘವೇಂದ್ರ ದೆಹಲಿಗೆ ಪ್ರಯಾಣಿಸಿದ್ದು, ಶಿವಮೊಗ್ಗದ ಸಿಂಗಧೂರು ಸೇತುವೆ ಸಂಬಂಧ ಕೇಂದ್ರ ಸಚಿವ ನಿತಿನ್ ಗಡ್ಕರಿ ಜತೆ ಯಡಿಯೂರಪ್ಪ ಸಭೆ ನಡೆಸುವರು. ಸಭೆಯಲ್ಲಿ ರಾಘವೇಂದ್ರ ಪಾಲ್ಗೊಳ್ಳುವರು. ಒಂದೇ ವಿಮಾನದಲ್ಲಿ ಯಡಿಯೂರಪ್ಪ- ಸಚಿವ ಡಿ.ಕೆ.ಶಿವಕುಮಾರ್   ದೆಹಲಿಯಲ್ಲಿ ಬಂದಿಳಿದದ್ದು ಹಲವು ಚರ್ಚೆಗೆ ಕಾರಣವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯಲ್ಲಿ ಹಿಂಸಾಚಾರ ತಾರಕಕ್ಕೆ: ಮೆಟ್ರೋ ನಿಲ್ದಾಣಗಳು ಸಂಪೂರ್ಣ ಬಂದ್

Karnataka Weather: ರಾಜ್ಯದ ಈ ಜಿಲ್ಲೆಯಲ್ಲಿ ಇಂದು ಹೈಅಲರ್ಟ್

ಧರ್ಮಸ್ಥಳದ ಸೌಜನ್ಯಾ ಪ್ರಕರಣ: ಸಿಬಿಐ ತನಿಖಾ ವೈಖರಿಗೆ ಸುಪ್ರೀಂ ಕೆಂಡಾಮಂಡಲ, ಮರು ತನಿಖೆಗೆ ತಾತ್ವಿಕ ಒಪ್ಪಿಗೆ

ಕಳೆದ ದಶಕದಲ್ಲಿ 152 ಬಾರಿ ಪ್ರಶ್ನೆಪತ್ರಿಕೆ ಸೋರಿಕೆ: ರಾಹುಲ್ ಗಾಂಧಿ

ಶಾಲಾ ಬಸ್ ಮೇಲೆ ಬಿದ್ದ ಬೃಹತ್ ಮರ, ಯುಕೆಜಿ ಬಾಲಕಿ ಸಾವು, ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

ಮುಂದಿನ ಸುದ್ದಿ
Show comments