Webdunia - Bharat's app for daily news and videos

Install App

ಎಂಪಿ ಚುನಾವಣೆ: ಬಿಎಸ್ವೈಗೆ ದೆಹಲಿಗೆ ಬುಲಾವ್

Webdunia
ಮಂಗಳವಾರ, 8 ಜನವರಿ 2019 (18:42 IST)
ಲೋಕಸಭಾ ಚುನಾವಣೆಯ ಸಿದ್ಧತೆ ನಡೆಸುವುದು, ಕಾರ್ಯತಂತ್ರ ರೂಪಿಸುವುದು ಹಾಗೂ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಜತೆ ಚರ್ಚೆ ನಡೆಸಲು ಬರುವಂತೆ ಬಿ.ಎಸ್.ಯಡಿಯೂರಪ್ಪನವರಿಗೆ ಪಕ್ಷದಿಂದ ಬುಲಾವ್ ಬಂದಿದೆ.

ಲೋಕಸಭಾ ಚುನಾವಣೆಯ ಸಿದ್ಧತೆ ಬಗ್ಗೆ ಚರ್ಚೆ ನಡೆಸಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರವರ ಬುಲಾವ್ ಮೇರೆಗೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ದೆಹಲಿಗೆ ತೆರಳಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ  ತುಮಕೂರಿನಲ್ಲಿ ಲೋಕಸಭಾ ಚುನಾವಣೆ ಸಿದ್ಧತೆಯ ಸಭೆಯಲ್ಲಿ ಪಾಲ್ಗೊಳ್ಳಬೇಕಿತ್ತು. ಕೊನೆ ಸಮಯದಲ್ಲಿ ಅಮಿತ್ ಶಾ ರವರ ಪ್ರವಾಸ ರದ್ದಾಗಿದೆ. ಹೀಗಾಗಿ ಯಡಿಯೂರಪ್ಪನವರಿಗೆ ದೆಹಲಿಗೆ ಬರುವಂತೆ ಅಮಿತ್ ಶಾ ದಿಢೀರ್ ಬುಲಾವ್ ಕಳುಹಿಸಿದ್ದು, ಯಡಿಯೂರಪ್ಪನವರು ತೆರಳಿದ್ದಾರೆ.

ಯಡಿಯೂರಪ್ಪನವರ ಜತೆ ಶಿವಮೊಗ್ಗ ಸಂಸದ ರಾಘವೇಂದ್ರ ದೆಹಲಿಗೆ ಪ್ರಯಾಣಿಸಿದ್ದು, ಶಿವಮೊಗ್ಗದ ಸಿಂಗಧೂರು ಸೇತುವೆ ಸಂಬಂಧ ಕೇಂದ್ರ ಸಚಿವ ನಿತಿನ್ ಗಡ್ಕರಿ ಜತೆ ಯಡಿಯೂರಪ್ಪ ಸಭೆ ನಡೆಸುವರು. ಸಭೆಯಲ್ಲಿ ರಾಘವೇಂದ್ರ ಪಾಲ್ಗೊಳ್ಳುವರು. ಒಂದೇ ವಿಮಾನದಲ್ಲಿ ಯಡಿಯೂರಪ್ಪ- ಸಚಿವ ಡಿ.ಕೆ.ಶಿವಕುಮಾರ್   ದೆಹಲಿಯಲ್ಲಿ ಬಂದಿಳಿದದ್ದು ಹಲವು ಚರ್ಚೆಗೆ ಕಾರಣವಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments