Webdunia - Bharat's app for daily news and videos

Install App

ಸಾರಿ ಕೇಳಿದ ಸಂಸದ ಪ್ರತಾಪ್ ಸಿಂಹ

Webdunia
ಮಂಗಳವಾರ, 6 ಡಿಸೆಂಬರ್ 2022 (18:00 IST)
ಮೈಸೂರು ಎಕ್ಸ್​​ಪ್ರೆಸ್ ವೇ ಬೈಪಾಸ್ ಓಪನ್ ತಡವಾಗಿದ್ದಕ್ಕೆ ಸಂಸದ ಪ್ರತಾಪ್​​ ಸಿಂಹ ಕ್ಷಮೆ ಕೋರಿದ್ದಾರೆ. ನವೆಂಬರ್ ಅಂತ್ಯದ ವೇಳೆ ಮದ್ದೂರು ಬೈಪಾಸ್ ಓಪನ್ ಆಗುತ್ತೆ ಎಂದು ಸಂಸದ ಪ್ರತಾಪ್​​​ ಸಿಂಹ ಹೇಳಿದ್ರು. ಫೇಸ್ ಬುಕ್ ಲೈವ್ ಮೂಲಕ ದಶಪಥ ಹೆದ್ದಾರಿ ಬಗ್ಗೆ ಪ್ರತಾಪ್ ಸಿಂಹ ಮಾಹಿತಿ ನೀಡಿದ್ದಾರೆ. ಆದರೆ ಅದು ಐದಾರು ದಿನ ತಡವಾಗಿದೆ.  ಮಳೆಯಿಂದ ಬೈಪಾಸ್ ಕಾಮಗಾರಿ ತಡವಾಗಿದೆ. ಇದೀಗ ಎಕ್ಸ್​​ಪ್ಯಾನ್ಷನ್​​​ ಜಾಯಿಂಟ್ ಕೆಲಸ ಮುಕ್ತಾಯವಾಗಿದೆ. ಸೇಫ್ಟಿ ಆಡಿಟಿಂಗ್, ಲೋಡ್ ಟೆಸ್ಟಿಂಗ್, ಮಾರ್ಕಿಂಗ್ ಕೂಡ ಮುಗಿದಿದೆ. ಒಂದೆರಡು ದಿನದಲ್ಲೆ ಮದ್ದೂರು ಬೈಪಾಸ್ ಸಂಚಾರಕ್ಕೆ ಮುಕ್ತವಾಗಲಿದೆ. ಫ್ಲೈ ಓವರ್ ಸಂಚಾರಕ್ಕೆ ಮುಕ್ತವಾದ್ರೆ ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಸಂಚರಿಸುವವರಿಗೆ ಕನಿಷ್ಠ 15ರಿಂದ 20 ನಿಮಿಷ ಉಳಿತಾಯವಾಗುತ್ತೆ. ಕೆಲವೇ ದಿನಗಳಲ್ಲಿ ಶ್ರೀರಂಗಪಟ್ಟಣ ಬೈಪಾಸ್ ಕೂಡ ಓಪನ್ ಆಗಲಿದೆ ಎಂದು ಅವರು ತಿಳಿಸಿದರು. ಹನಕರೆ, ಯಲಿಯೂರು, ಇಂಡವಾಳು ಸೇರಿದಂತೆ ಹಲವೆಡೆ ಅಂಡರ್ ಪಾಸ್ ಕಾಮಗಾರಿ ಆಗಬೇಕಿದೆ. ಮೈಸೂರು-ಬೆಂಗಳೂರು ದಶಪಥ ರಸ್ತೆ ಕಾಮಗಾರಿ ಪೂರ್ಣವಾಗಲು ಇನ್ನು ಎರಡು ತಿಂಗಳು ಬೇಕಾಗುತ್ತದೆ ಎಂದರು. ಮದ್ದೂರು ಪ್ಲೈ ಓವರ್ ಮೇಲೆ ಸಂಚರಿಸಿ ಸಂಸದರು ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಚಿವರ ಮಕ್ಕಳ ಒತ್ತಡಕ್ಕೆ ಈ ವಿಜಯೋತ್ಸವ ಆಚರಿಸಲಾಯಿತೇ: ಶೋಭಾ ಕರಂದ್ಲಾಜೆ

Chinnaswamy stampede: ಹೈಕೋರ್ಟ್ ಜಡ್ಜ್ ತನಿಖೆ, 50 ಲಕ್ಷ ಪರಿಹಾರ ಕೊಡಲು ವಿಜಯೇಂದ್ರ ಆಗ್ರಹ

ಅಲ್ಲು ಅರ್ಜುನ್ ರೀತಿ ಸಿದ್ದರಾಮಯ್ಯ, ಡಿಕೆಶಿಯನ್ನು ಅರೆಸ್ಟ್ ಮಾಡಬೇಕು: ಬಸನಗೌಡ ಯತ್ನಾಳ್

Chinnaswamy stampede : ಪಹಲ್ಗಾಮ್ ದಾಳಿಗೆ ಕೇಂದ್ರದ ಮೇಲೆ ಗೂಬೆ ಕೂರಿಸಿದ್ರಿ ಈಗೇನಂತೀರಿ

Chinnaswamy stampede: ಇದೊಂದು ಸರ್ಕಾರಿ ಪ್ರಾಯೋಜಿತ ಹತ್ಯಾಕಾಂಡವಲ್ಲವೇ: ಸಿ.ಟಿ.ರವಿ

ಮುಂದಿನ ಸುದ್ದಿ
Show comments