Webdunia - Bharat's app for daily news and videos

Install App

‘ಪ್ರಕಾಶ್ ರೈಯದ್ದು ಉಗಿದು ಓಡುವ ಜಾಯಮಾನ’

Webdunia
ಮಂಗಳವಾರ, 14 ನವೆಂಬರ್ 2017 (09:06 IST)
ಬೆಂಗಳೂರು: ಕೇಂದ್ರ ಸರ್ಕಾರದ ಕ್ರಮಗಳ ವಿರುದ್ಧ ಕಿಡಿ ಕಾರುವ ಬಹುಭಾಷಾ ನಟ ಪ್ರಕಾಶ್ ರೈ ಬಗ್ಗೆ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ. ಪ್ರಕಾಶ್ ರೈಯದ್ದು ಉಗುಳಿ ಓಡುವ ಜಾಯಮಾನ ಎಂದು ಅವರು ಲೇವಡಿ ಮಾಡಿದ್ದಾರೆ.


ಅವರಂತೆ ಮಾತನಾಡಲು ನಮಗೆ ಬರುವುದಿಲ್ಲ. ನಮಗೆ ಮಾಡಲು ಬೇಕಾದಷ್ಟು ಕೆಲಸಗಳಿವೆ. ಗೌರಿ ಲಂಕೇಶ್ ಹತ್ಯೆ, ಹಿಂದೂ ಭಯೋತ್ಪಾದನೆ ಬಗ್ಗೆ ಮಾತನಾಡಿ ತಾನೊಬ್ಬ ಬಹುದೊಡ್ಡ ನಟ ಎಂದು ಪ್ರಕಾಶ್ ಸಾಬೀತು ಪಡಿಸಿದ್ದಾರೆ ಎಂದು ಪ್ರತಾಪ್ ಸಿಂಹ ವ್ಯಂಗ್ಯವಾಡಿದ್ದಾರೆ.

ಅಮಿತಾಭ್, ಎನ್ ಟಿಆರ್ ಮುಂತಾದ ಬಹುದೊಡ್ಡ ನಟರೆಲ್ಲಾಈ ರೀತಿ ಟೀಕೆ ಮಾಡಿಕೊಂಡು ತಿರುಗಲಿಲ್ಲ. ತಮ್ಮ ವೃತ್ತಿ ಗೌರವ ಕಾಪಾಡಿಕೊಂಡರು. ಆದರೆ ಪ್ರಕಾಶ್ ರೈ ಹಾಗಲ್ಲ. ಉತ್ತರ ಪ್ರದೇಶ ಶಿಶು ಹತ್ಯೆ ಬಗ್ಗೆ ಮಾತನಾಡುವ ಪ್ರಕಾಶ್ ರೈ ಕೋಲಾರದಲ್ಲಿ ನಡೆದ ಮಕ್ಕಳ ಮಾರಣ ಹೋಮದ ಬಗ್ಗೆ ಮಾತನಾಡುವುದಿಲ್ಲವೇಕೆ? ಹಿಂದೂಗಳ ಹತ್ಯೆ ಬಗ್ಗೆ ಧ್ವನಿಯೆತ್ತುವುದಿಲ್ಲವೇಕೆ? ಕಾಂಗ್ರೆಸ್ ಸಚಿವರೊಂದಿಗೆ ವೇದಿಕೆ ಹಂಚಿಕೊಳ್ಳುವ ಪ್ರಕಾಶ್ ರೈ ತಮ್ಮ ಲಾಭಕ್ಕಾಗಿ ಕೇಂದ್ರದ ವಿರುದ್ಧ ಕಿಡಿ ಕಾರುತ್ತಾರೆ ಎಂದು ಪ್ರತಾಪ್ ಸಿಂಹ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments