‘ಪ್ರಕಾಶ್ ರೈಯದ್ದು ಉಗಿದು ಓಡುವ ಜಾಯಮಾನ’

Webdunia
ಮಂಗಳವಾರ, 14 ನವೆಂಬರ್ 2017 (09:06 IST)
ಬೆಂಗಳೂರು: ಕೇಂದ್ರ ಸರ್ಕಾರದ ಕ್ರಮಗಳ ವಿರುದ್ಧ ಕಿಡಿ ಕಾರುವ ಬಹುಭಾಷಾ ನಟ ಪ್ರಕಾಶ್ ರೈ ಬಗ್ಗೆ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ. ಪ್ರಕಾಶ್ ರೈಯದ್ದು ಉಗುಳಿ ಓಡುವ ಜಾಯಮಾನ ಎಂದು ಅವರು ಲೇವಡಿ ಮಾಡಿದ್ದಾರೆ.


ಅವರಂತೆ ಮಾತನಾಡಲು ನಮಗೆ ಬರುವುದಿಲ್ಲ. ನಮಗೆ ಮಾಡಲು ಬೇಕಾದಷ್ಟು ಕೆಲಸಗಳಿವೆ. ಗೌರಿ ಲಂಕೇಶ್ ಹತ್ಯೆ, ಹಿಂದೂ ಭಯೋತ್ಪಾದನೆ ಬಗ್ಗೆ ಮಾತನಾಡಿ ತಾನೊಬ್ಬ ಬಹುದೊಡ್ಡ ನಟ ಎಂದು ಪ್ರಕಾಶ್ ಸಾಬೀತು ಪಡಿಸಿದ್ದಾರೆ ಎಂದು ಪ್ರತಾಪ್ ಸಿಂಹ ವ್ಯಂಗ್ಯವಾಡಿದ್ದಾರೆ.

ಅಮಿತಾಭ್, ಎನ್ ಟಿಆರ್ ಮುಂತಾದ ಬಹುದೊಡ್ಡ ನಟರೆಲ್ಲಾಈ ರೀತಿ ಟೀಕೆ ಮಾಡಿಕೊಂಡು ತಿರುಗಲಿಲ್ಲ. ತಮ್ಮ ವೃತ್ತಿ ಗೌರವ ಕಾಪಾಡಿಕೊಂಡರು. ಆದರೆ ಪ್ರಕಾಶ್ ರೈ ಹಾಗಲ್ಲ. ಉತ್ತರ ಪ್ರದೇಶ ಶಿಶು ಹತ್ಯೆ ಬಗ್ಗೆ ಮಾತನಾಡುವ ಪ್ರಕಾಶ್ ರೈ ಕೋಲಾರದಲ್ಲಿ ನಡೆದ ಮಕ್ಕಳ ಮಾರಣ ಹೋಮದ ಬಗ್ಗೆ ಮಾತನಾಡುವುದಿಲ್ಲವೇಕೆ? ಹಿಂದೂಗಳ ಹತ್ಯೆ ಬಗ್ಗೆ ಧ್ವನಿಯೆತ್ತುವುದಿಲ್ಲವೇಕೆ? ಕಾಂಗ್ರೆಸ್ ಸಚಿವರೊಂದಿಗೆ ವೇದಿಕೆ ಹಂಚಿಕೊಳ್ಳುವ ಪ್ರಕಾಶ್ ರೈ ತಮ್ಮ ಲಾಭಕ್ಕಾಗಿ ಕೇಂದ್ರದ ವಿರುದ್ಧ ಕಿಡಿ ಕಾರುತ್ತಾರೆ ಎಂದು ಪ್ರತಾಪ್ ಸಿಂಹ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೆಂಕೋ ಸಂಸ್ಥೆಯ 'ಸೆನೆಸ್' ಲಕ್ಸುರಿ ಬ್ರ್ಯಾಂಡ್‌ನ ಮೊದಲ ಮಳಿಗೆ ಉದ್ಘಾಟನೆ

ನಮ್ಮ ಮೆಟ್ರೊ ದರ ಪರಿಷ್ಕರಣೆ ಬೆನ್ನಲ್ಲೇ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಸಂಸದ ತೇಜಸ್ವಿ ಸೂರ್ಯ ಹೇಳಿದ್ದೇನು

ರಾಜರು ಎಂದು ಪರಿಗಣಿಸಿಕೊಳ್ಳುವವರು ಆರ್ಥಿಕ ಅಸಮಾನತೆ ಬಗ್ಗೆ ಮಾತನಾಡುತ್ತಾರೆ: ಪ್ರಧಾನಿ ಮೋದಿ ತಿರುಗೇಟು

ಅಬ್ಬಬ್ಬಾ, ನಾಗರ ಹಾವಿನೊಂದಿಗೆ ವ್ಯಕ್ತಿಯ ಹುಚ್ಚಾಟ, ಪ್ರಾಣ ಉಳಿದಿದ್ದೆ ಹೆಚ್ಚು, video

ಪ್ರಧಾನಿ ಮೋದಿ ಬಳಿ ಬಂದು ಕಾಂಗ್ರೆಸ್ಸಿಗರು ಗಲಾಟೆ ಮಾಡಲು ಪ್ಲ್ಯಾನ್ ಮಾಡಿದ್ದರು, ಅದಕ್ಕೆ ಬರಬೇಡಿ ಎಂದೆ: ಸ್ಪೀಕರ್ ಓಂ ಬಿರ್ಲಾ

ಮುಂದಿನ ಸುದ್ದಿ
Show comments