Webdunia - Bharat's app for daily news and videos

Install App

ತಮ್ಮವರೇ 15 ಸಚಿವರ ವಿರುದ್ದವೇ ದೂರು ಕೊಟ್ಟ ಎಂಪಿ ರೇಣುಕಾಚಾರ್ಯ

Webdunia
ಭಾನುವಾರ, 30 ಜನವರಿ 2022 (20:39 IST)
15ಕ್ಕೂ ಹೆಚ್ಚು ಸಚಿವರು ಬಿಜೆಪಿ ಶಾಸಕರ ಅಹವಾಲುಗಳಿಗೆ ಸ್ಪಂದಿಸುತ್ತಿಲ್ಲ. ಶಾಸಕರ ದೂರವಾಣಿ ಕರೆಗಳನ್ನೂ ಸ್ವೀಕರಿಸುವುದಿಲ್ಲ ಎಂದು ದೂರಿ ಹೊನ್ನಾಳಿ ಬಿಜೆಪಿ ಶಾಸಕ ಎಂ. ಪಿ. ರೇಣುಕಾಚಾರ್ಯ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರಿಗೆ ದೂರು ಸಲ್ಲಿಸಿದ್ದಾರೆ.
ಹೌದು, ಸಿಎಂ ಬೊಮ್ಮಾಯಿ ಮತ್ತು ಕಟೀಲ್‌ ಅವರನ್ನು ಭೇಟಿ ಮಾಡಿ ಲಿಖಿತ ದೂರು ಸಲ್ಲಿಸಿರುವ ರೇಣುಕಾಚಾರ್ಯ, ‘ಕೆಲವು ಸಚಿವರು ತಮ್ಮಿಂದಲೇ ಈ ಸರ್ಕಾರ ಬಂದಿದೆ ಎಂಬ ದುರಹಂಕಾರದ ವರ್ತನೆ ಪ್ರದರ್ಶಿಸುತ್ತಿದ್ದು, ಖುದ್ದಾಗಿ ಭೇಟಿಮಾಡಿ ಪತ್ರಗಳನ್ನು ನೀಡಿದರೆ, ಆಪ್ತ ಸಹಾಯಕರಿಂದ ಸಹಿ ಮಾಡಿಸಿ ಅಧಿಕಾರಿಗಳಿಗೆ ನೀಡುತ್ತಾರೆ.
ಇನ್ನು, ಸಚಿವರ ಆಪ್ತ ಕಾರ್ಯದರ್ಶಿಗಳೂ ದೂರವಾಣಿ ಕರೆ ಸ್ವೀಕರಿಸುವುದಿಲ್ಲ. ಅಂತಹ ಸಚಿವರಿಗೆ ತಿಳಿ ಹೇಳಿ, ಪಕ್ಷದ ಶಾಸಕರಿಗೆ ಸ್ಪಂದಿಸುವಂತೆ ತಾಕೀತು ಮಾಡಬೇಕು ಎಂದು ಕೋರಿದ್ದಾರೆ’ ಎಂದು ಮೂಲಗಳು ತಿಳಿಸಿವೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments