Webdunia - Bharat's app for daily news and videos

Install App

ಬಿಜೆಪಿಯಲ್ಲಿ ಭುಗಿಲೆದ್ದ ಭಿನ್ನಮತ: ಹೈಕಮಾಂಡ್‌ಗೆ ಸಂಸದರ ಅಹವಾಲು

Webdunia
ಸೋಮವಾರ, 13 ಮಾರ್ಚ್ 2017 (16:21 IST)
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ನೀಡುವಂತೆ ಸಂಸದರು ಒತ್ತಡ ಹೇರುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಬಿಜೆಪಿಯಲ್ಲಿ ಭಿನ್ನಮತ ಭುಗಿಲೆದ್ದಿದೆ.
 
ಸಂಸದರು ಆಯ್ಕೆ ಮಾಡಿರುವ ಕ್ಷೇತ್ರಗಳಲ್ಲಿರುವ ಬಿಜೆಪಿ ಮುಖಂಡರು ಟಿಕೆಟ್ ನಮಗೆ ಬೇಕು. ಸಂಸದರಾಗಿ ಆಯ್ಕೆಯಾಗಿರುವವರಿಗೆ ಯಾವುದೇ ಕಾರಣಕ್ಕೂ ಟಿಕೆಟ್ ಕೊಡುವುದು ಬೇಡ ಎಂದು ಹೈಕಮಾಂಡ್‌ಗೆ ಮನವಿ ಮಾಡಿದ್ದಾರೆ.    
 
ಉತ್ತರಪ್ರದೇಶದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಫಲಿತಾಂಶದಿಂದ ಪ್ರೇರಣೆಗೊಂಡಿರುವ ಬಿಜೆಪಿ ಸಂಸದರು ಒಂದು ವೇಳೆ ಶಾಸಕರಾಗಿ ಆಯ್ಕೆಯಾದಲ್ಲಿ ಸಚಿವ ಸ್ಥಾನ ಪಡೆಯಬಹುದು. ಕೇವಲ ಸಂಸದರಾಗಿಯೇ ಮುಂದುವರಿಯುವುದು ಯಾವ ಪುರುಷಾರ್ಥಕ್ಕೆ ಎಂದು ಹೈಕಮಾಂಡ್ ಮುಖಂಡರಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. 
 
ಸಂಸತ್ತಿನಿಂದ ವಿಧಾನಸಭೆಗೆ ಬರಲು ಸಂಸದರು ಪ್ಲಾನ್ ಮಾಡಿದ್ದಾರೆ. ಕ್ಷೇತ್ರ ಹುಡುಕಿದ್ದೇವೆ, ನಮಗೂ ವಿಧಾನಸಭಾ ಕ್ಷೇತ್ರದ ಟಿಕೆಟ್ ಕೊಡಿ ಅಂತ ಕೆಲ ಸಂಸದರು ಬಿಜೆಪಿ ವರಿಷ್ಠರಿಗೆ ಬೇಡಿಕೆ ಇಟ್ಟಿದ್ದಾರೆ ಎಂದು ಹೇಳಲಾಗಿದೆ. ಆದ್ರೆ ಸಂಸದರ ಬೇಡಿಕೆಗೆ ಸೊಪ್ಪು ಹಾಕದ ವರಿಷ್ಠರು, ಸದ್ಯಕ್ಕೆ ಎಂಪಿಗಳಿಗೆ ಟಿಕೆಟ್ ಇಲ್ಲ ಎಂದು ಹೇಳಿದ್ದಾರೆ ಎನ್ನಲಾಗಿದೆ.
 
ಆದರೆ, ಸಂಸದರ ಮನವಿಯನ್ನು ತಿರಸ್ಕರಿಸಿರುವ ಹೈಕಮಾಂಡ್ ಹಾಲಿ ಸಂಸದರಿಗೆ ಯಾವುದೇ ಕಾರಣಕ್ಕೂ ಟಿಕೆಟ್ ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.
 
ಬಿಜೆಪಿಯ ಘಟಾನುಘಟಿ ನಾಯಕರಾದ ಶೋಭಾ ಕರಂದ್ಲಾಜೆ(ಪುತ್ತೂರು ) ಅನಂತಕುಮಾರ್ ಹೆಗಡೆ(ಯಲ್ಲಾಪುರ ಕ್ಷೇತ್ರ)ಕರಡಿ ಸಂಗಣ್ಣ(ಕೊಪ್ಪಳ ಕ್ಷೇತ್ರ), ಶ್ರೀರಾಮುಲು (ಬಳ್ಳಾರಿ ಗ್ರಾಮಾಂತರ) ಪಿ.ಸಿ.ಮೋಹನ್(ಗಾಂಧಿನಗರ ಕ್ಷೇತ್ರ)ದಿಂದ ಟಿಕೆಟ್ ನೀಡುವಂತೆ ಹೈಕಮಾಂಡ್‌ ನಾಯಕರಲ್ಲಿ ಮನವಿ ಮಾಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments