Webdunia - Bharat's app for daily news and videos

Install App

ಕೈ ಶಾಸಕರು ಸೇಫ್ಟಿಗಾಗಿ ರೇಸಾರ್ಟನಲ್ಲಿದ್ದಾರೆ ಎಂದ ಸಂಸದ!

Webdunia
ಶನಿವಾರ, 19 ಜನವರಿ 2019 (20:46 IST)
ಕಾಂಗ್ರೆಸ್ ಶಾಸಕರನ್ನು ಬಿಜೆಪಿಯವರು ಆಪರೇಷನ್ ಕಮಲದ ಮೂಲಕ ಆಸೆ, ಆಮಿಷ ಒಡ್ಡಿ ರಾಜೀನಾಮೆ ಕೊಡಿಸುವ ಪ್ರಯತ್ನ ಮಾಡಿದ್ದರು. ಈ ಒಂದು ಕಾರಣಕ್ಕಾಗಿ  ಸೇಫ್ಟಿಯಿಂದ ಕೈ ಶಾಸಕರು ರೆಸಾರ್ಟ್ ನಲ್ಲಿ ಇದ್ದಾರೆ ಎಂದು ಸಂಸದರು ಹೇಳಿದ್ದಾರೆ.

ಕಾಂಗ್ರೆಸ್ ಶಾಸಕರು ಇಂದು ಈಗಲ್ಟನ್ ರೆಸಾರ್ಟ್ ನಲ್ಲಿ ಸಭೆ ಸೇರಿದ್ದಾರೆ. ಬಿಜೆಪಿಯ ಶಾಸಕರು ಸಹ ಹರಿಯಾಣದ ರೆಸಾರ್ಟ್ ನಲ್ಲಿ ಕಳೆದ ಒಂದು ವಾರದಿಂದ ಇದ್ದಾರೆ ಎಂದು ಸಂಸದ ಆರ್.ದೃವನಾರಾಯಣ್ ಹೇಳಿಕೆ ನೀಡಿದ್ದಾರೆ.

ಪ್ರಜಾಪ್ರಭುತ್ವದ ನೆಲೆಯಲ್ಲಿ, ರಾಜ್ಯದ ಹಿತದೃಷ್ಟಿಯಿಂದ ಇಂತಹ ಬೆಳವಣಿಗೆ ಒಳ್ಳೆಯದಲ್ಲ. ಒಂದು ಪಕ್ಷದಿಂದ ಚುನಾಯಿತರಾದಂತಹವರು ಗೆದ್ದನಂತರ ಪಕ್ಷಾತೀತವಾಗಿ ಜನರ ಸೇವೆ‌ ಮಾಡಬೇಕು. ಆದರೆ ಆಡಳಿತ ಪಕ್ಷವನ್ನು  ಅಸ್ಥಿರಗೊಳಿಸುವಂತಹ ಕಾರ್ಯ‌ ಸರಿಯಲ್ಲ ಎಂದರು.

ಬಿಜೆಪಿಯ ಶ್ರೀನಿವಾಸ್ ಪ್ರಸಾದ್ ರವರು ಸಹ ಇದು ಒಳ್ಳೆಯ ಬೆಳವಣಿಗೆ ಅಲ್ಲ ಅಂತ ಹೇಳಿದ್ದಾರೆ. ಬಿಜೆಪಿಯವರು ತಂಗಿರುವ ರೆಸಾರ್ಟ್ ನಲ್ಲಿ ಒಂದು ದಿನಕ್ಕೆ 40 ಸಾವಿರ ಖರ್ಚು. ಇಂತಹ ದುಬಾರಿ ಖರ್ಚನ್ನು ಜನರಿಂದ ಆಯ್ಕೆಯಾಗಿರುವ ಜನಪ್ರತಿನಿಧಿಗಳು ಮಾಡಬಾರದು ಎಂದರು.

ಇನ್ನು ಬಹುಮತ ಇರುವವರು ಸರ್ಕಾರ ನಡೆಸುತ್ತಾರೆ. ಆಡಳಿತ ಸರಿಯಿಲ್ಲ ಅಂದ್ರೆ ಮತ್ತೊಬ್ಬರಿಗೆ ಸರ್ಕಾರ ನಡೆಸುವ ಅವಕಾಶ ಸಿಗುತ್ತದೆ. ಅದಕ್ಕೆ ತಾಳ್ಮೆಯಿಂದ ಕಾಯಬೇಕು. ಅದನ್ನು ಬಿಟ್ಟು ಇಂತಹ ಆಪರೇಷನ್ ಕಮಲ ಮಾಡಬಾರದು ಎಂದು  ಬಿಜೆಪಿಯವರಿಗೆ ಟಾಂಗ್ ನೀಡಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮಂಗಳೂರಿನಲ್ಲಿ ಸುರಿದ ಮಳೆಗೆ ಅವಾಂತರ: ರಸ್ತೆ ಮೇಲೆ ಪ್ರವಾಹದಂತೆ ಹರಿದ ಮಳೆ ನೀರು

Karnataka Rains: ಈ ಆರು ಜಿಲ್ಲೆಗಳಿಗೆ ನಾಳೆಯೂ ಹವಾಮಾನ ಎಚ್ಚರಿಕೆ ಗಮನಿಸಿ

Maharashtra: ಅಕ್ರಮವಾಗಿ ನೆಲೆಸಿದ್ದ ನಾಲ್ವರು ಬಾಂಗ್ಲಾದೇಶಿಗಳ ಬಂಧನ

Air India ವಿಮಾನ ದುರಂತ: ಮೃತ ನಾಲ್ವರು ಎಂಬಿಬಿಎಸ್‌ ವಿದ್ಯಾರ್ಥಿಗಳು ಇವರೇ

ಮುಂದಿನ ಸುದ್ದಿ
Show comments