Select Your Language

Notifications

webdunia
webdunia
webdunia
webdunia

ಮೀಸಲಾತಿ ವಿಚಾರದಲ್ಲಿ ಎಸ್‌ಟಿ ಸಮುದಾಯಕ್ಕೆ ಅನ್ಯಾಯ: ಶ್ರೀರಾಮುಲು

ಮೀಸಲಾತಿ ವಿಚಾರದಲ್ಲಿ ಎಸ್‌ಟಿ ಸಮುದಾಯಕ್ಕೆ ಅನ್ಯಾಯ: ಶ್ರೀರಾಮುಲು
ಬಳ್ಳಾರಿ , ಶನಿವಾರ, 15 ಅಕ್ಟೋಬರ್ 2016 (11:23 IST)
ಮೀಸಲಾತಿ ವಿಚಾರದಲ್ಲಿ ರಾಜ್ಯ ಸರಕಾರದಿಂದ ಎಸ್‌ಟಿ ಸಮುದಾಯಕ್ಕೆ ಅನ್ಯಾಯವಾಗುತ್ತಿದೆ ಎಂದು ಸಂಸದ ಶ್ರೀರಾಮುಲು ಆರೋಪಿಸಿದ್ದಾರೆ.
 
ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್‌ಟಿ ಸಮುದಾಯಕ್ಕೆ 75 ಪ್ರತಿಶತ ಮೀಸಲಾತಿ ನೀಡಿವಂತೆ ಸುಪ್ರೀಂಕೋರ್ಟ್ ಆದೇಶ ನೀಡಿದೆ. ಸುಪ್ರೀಂ ಆದೇಶ ಇದ್ದರು ಸಹ ಎಸ್‌ಟಿ ಸಮುದಾಯಕ್ಕೆ ಮೀಸಲಾತಿ ನೀಡುತ್ತಿಲ್ಲ. ಈ ಕುರಿತು ವಾಲ್ಮೀಕಿ ಸಮುದಾಯದ ಪ್ರಸನ್ನಾಪುರಿ ಪೀಠದ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಳಿ ನಿಯೋಗ ತೇರಳ್ತೇವೆ ಎಂದು ಹೇಳಿದರು.
 
ವಾಲ್ಮೀಕಿ ಸಮುದಾಯವನ್ನು ಒಂದುಗೂಡಿಸಲು ಅಕ್ಟೋಬರ್ 23 ರಂದು ಬಿಜೆಪಿ ವತಿಯಿಂದ ಲಿಂಗಸಗೂರಿನಲ್ಲಿ ಬೃಹತ್ ಸಮಾವೇಶ ಕೈಗೊಳ್ಳುತ್ತಿದ್ದೇವೆ ಎಂದು ಸಂಸದ ಶ್ರೀರಾಮುಲು ಮಾಹಿತಿ ನೀಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನಿಂದ ಗೋವಾದಲ್ಲಿ ಬ್ರಿಕ್ಸ್ ಸಮ್ಮೇಳನ