Webdunia - Bharat's app for daily news and videos

Install App

ಟಿಕೆಟ್‌ ನನಗೇ ಸಿಗುವುದು ಶೇ 500 ರಷ್ಟು ಖಚಿತ ಎಂದು ಸಂಸದೆ ಸುಮಲತಾ

geetha
ಬುಧವಾರ, 6 ಮಾರ್ಚ್ 2024 (16:00 IST)
ಮಂಡ್ಯ -ಈ ಬಾರಿ ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿಯಾಗಿ ಲೋಕಸಭಾ ಚುನಾವಣೆ ಎದುರಿಸುತ್ತಿದ್ದು ಮಂಡ್ಯ, ಹಾಸನ ಮತ್ತು ಕೋಲಾರ ಕ್ಷೇತ್ರದಲ್ಲಿ ಜೆಡಿಎಸ್‌ -ಬಿಜೆಪಿ ಮೈತ್ರಿ ಅಭ್ಯರ್ಥಿ ಸ್ಪರ್ಧಿಸಿಲಿದ್ದಾರೆನ್ನಲಾಗಿತ್ತು. ಆದರೆ ಈಗ ಜೆಡಿಎಸ್‌ ನಾಯಕ ಉತ್ಸಾಹಕ್ಕೆ ತಣ್ಣೀರೆರೆಚಿರುವ ಸುಮಲತಾ, ತಮ್ಮ ಸ್ಪರ್ಧೆಯನ್ನು ಖಚಿತಪಡಿಸಿದ್ದಾರೆ.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ  ಬಿಜೆಪಿ ಟಿಕೆಟ್‌ ನನಗೇ ಸಿಗುವುದು ಶೇ 500 ರಷ್ಟು ಖಚಿತ ಎಂದು ಸಂಸದೆ ಸುಮಲತಾ  ಹೇಳಿದ್ದಾರೆ. ಬುಧವಾರ ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಂಡ್ಯದಲ್ಲಿ ಬಿಜೆಪಿ ಪಕ್ಷದಿಂದ ತಾವು ಸ್ಪರ್ಧಿಸುತ್ತಿರುವುದನ್ನು ಖಚಿತಪಡಿಸಿದರು.

ಇದೇ ವೇಳೆ ಕಾಂಗ್ರೆಸ್‌ ನಾಯಕರ ವಿರುದ್ದವೂ ವಾಗ್ದಾಳಿ ನಡೆಸಿದ ಅವರು, ತಾವು ಮಾಡದ ಕೆಲಸಕ್ಕೆ ಮಂಡ್ಯ ಶಾಸಕರು ಕ್ರೆಡಿಟ್‌ ತೆಗೆದುಕೊಳ್ಳಲು ಹೊರಟಿದ್ದಾರೆ ಎಂದು ಟೀಕಿಸಿದರು. ಹನಕೆರೆ ಫ್ಲೈ ಓವರ್‌ ಹಲವು ತಿಂಗಳಿಂದ ಕಾಮಗಾರಿ ನಡೆಯುತ್ತಿದ್ದು, ಈಗ ಉದ್ಘಾಟನೆಯ ಹಂತ ತಲುಪಿದೆ. ಆದರೆ ಕಾಂಗ್ರೆಸ್‌ ಶಾಸಕರು ಅಧಿಕಾರಕ್ಕೆ ಬಂದು ಇನ್ನೂ 7-8 ತಿಂಗಳೂ ಸಹ ಆಗಿಲ್ಲ. ಇದು ತಮ್ಮದೇ ಕೃತ್ಯವೆಂಬಂತೆ ಬಿಂಬಿಸುತ್ತಿದ್ದಾರೆ ಎಂದು ಲೇವಡಿ ಮಾಡಿದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments