Webdunia - Bharat's app for daily news and videos

Install App

ರೈತರ ಜಮೀನೂ ವಕ್ಫ್ ಬೋರ್ಡ್ ಗೆ, ಇದ್ಯಾವ ನ್ಯಾಯ: ತೇಜಸ್ವಿ ಸೂರ್ಯ ಆಕ್ರೋಶ

Krishnaveni K
ಶುಕ್ರವಾರ, 25 ಅಕ್ಟೋಬರ್ 2024 (15:45 IST)
ಬೆಂಗಳೂರು: ವಿಜಯಪುರದಲ್ಲಿ ಸಚಿವ ಜಮೀರ್ ಅಹ್ಮದ್ ಸೂಚನೆ ಮೇರೆಗೆ ರೈತರ ಜಮೀನುಗಳಿಗೂ ಅಧಿಕಾರಿಗಳು ವಕ್ಫ್ ಬೋರ್ಡ್ ಆಸ್ತಿ ನೋಟಿಸ್ ನೀಡಿರುವುದರ ಬಗ್ಗೆ ಸಂಸದ ತೇಜಸ್ವಿ ಸೂರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಸತಿ, ವಕ್ಫ್ ಸಚಿವ ಜಮೀರ್ ಅಹ್ಮದ್ ಸೂಚನೆ ಮೇರೆಗೆ ವಿಜಯಪುರದ ಅಧಿಕಾರಿಗಳು ಕೆಲವು ರೈತರ ಜಮೀನಿಗೂ ವಕ್ಫ್ ಆಸ್ತಿ ಎಂದು ನೋಟಿಸ್ ನೀಡಿದ್ದಾರೆ. ಆದರೆ ಒಂದೇ ಒಂದು ದಾಖಲೆಗಳಲ್ಲೂ ಇದು ವಕ್ಫ್ ಬೋರ್ಡ್ ಗೆ ಹೇಗೆ ಸೇರುತ್ತದೆ ಎಂಬುದಕ್ಕೆ ಕಾರಣಗಳಿಲ್ಲ. ಜಮೀರ್ ಅಹ್ಮದ್ ಮತ್ತು ಸಿದ್ದರಾಮಯ್ಯ ಸೇರಿಕೊಂಡು ಕರ್ನಾಟಕವನ್ನು ಪಾಕಿಸ್ತಾನ ಮಾಡಲು ಹೊರಟಿದ್ದಾರಾ ಎಂದು ತೇಜಸ್ವಿ ಸೂರ್ಯ ಆಕ್ರೋಶ ಹೊರಹಾಕಿದ್ದಾರೆ.

ಈಗಾಗಲೇ ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದಲ್ಲಿ ವಕ್ಫ್ ನೋಟಿಸ್ ಗೆ ಸಂಬಂಧಿಸಿದಂತೆ ಬೃಹತ್ ಪ್ರತಿಭಟನಾ ಸಮಾವೇಶ ನಡೆದಿದೆ. ವಿಜಯಪುರದಲ್ಲಿ 10 ಸಾವಿರ ಎಕರೆ ಜಮೀನನ್ನು ವಕ್ಫ್ ಆಸ್ತಿ ಎಂದು ಗುರುತು ಹಾಕಲು ಜಮೀರ್ ಆಹ್ಮದ್ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಬೃಹತ್ ಪ್ರತಿಭಟನೆ ನಡೆದಿತ್ತು.

ಇದರ ನಡುವೆ ನೋಟಿಸ್ ಪಡೆದವರ ಜೊತೆಗಿನ ಸಭೆಯಲ್ಲಿ ಇಂದು ತೇಜಸ್ವಿ ಸೂರ್ಯ ಭಾಗಿಯಾಗಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹಿಂದೂಗಳಿಗೆ ಅಪಮಾನ ಮಾಡಿ ಮುಸ್ಲಿಮರಿಗಷ್ಟೇ ಆಸ್ತಿ ಕೊಡಲು ಹೊರಟಿದ್ದೀರಾ? ತಹಶೀಲ್ದಾರರು, ಜಿಲ್ಲಾಧಿಕಾರಿಗಳು ಸಂವಿಧಾನದ ಪ್ರಕಾರ ಸರ್ಕಾರ ನಡೆಸಬೇಕೇ ಹೊರತು ಷರಿಯಾ ಕಾನೂನು ಪ್ರಕಾರ ಅಲ್ಲ. ಜಮೀರ್ ಅಹ್ಮದ್ ಹೇಳಿದರು, ಮಸೀದಿಯ ಮುಲ್ಲಾ ಹೇಳಿದರು ಎಂದು ಕೆಲಸ ಮಾಡುವುದಲ್ಲ.  ಇದು ಮುಂದುವರಿದರೆ ಹೈಕೋರ್ಟ್ ಮತ್ತು ಲೋಕಾಯುಕ್ತಕ್ಕೆ ಹೋಗಿ ನಿಮ್ಮನ್ನು ಅಮಾನತು ಮಾಡಬೇಕಾಗುತ್ತದೆ ಎಂದು ತೇಜಸ್ವಿ ಸೂರ್ಯ ಎಚ್ಚರಿಕೆ ನೀಡಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments