Webdunia - Bharat's app for daily news and videos

Install App

ಲೋ ತಮ್ಮಾ ಮೆಟ್ರೊ ದರ ಏರಿಕೆ ಮಾಡಿದ್ದು ರಾಜ್ಯ ಸರ್ಕಾರ ಅಲ್ಲ: ಟ್ರೋಲ್ ಆದ ತೇಜಸ್ವಿ ಸೂರ್ಯ

Krishnaveni K
ಸೋಮವಾರ, 10 ಫೆಬ್ರವರಿ 2025 (13:51 IST)
ಬೆಂಗಳೂರು: ಲೋ ತಮ್ಮಾ ಮೆಟ್ರೊ ದರ ಏರಿಕೆ ಮಾಡಲು ಒಪ್ಪಿಗೆ ಕೊಟ್ಟಿದ್ದು ಕೇಂದ್ರ ಸರ್ಕಾರ, ಕರ್ನಾಟಕ ಸರ್ಕಾರ ಅಲ್ಲ. ಹೀಗಂತ ಮೆಟ್ರೊ ದರ ಏರಿಕೆ ವಿರುದ್ಧ ಟ್ವೀಟ್ ಮಾಡಿದ್ದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಟ್ರೋಲ್ ಗೊಳಗಾಗಿದ್ದಾರೆ.

ನಿನ್ನೆಯಿಂದ ನಮ್ಮ ಮೆಟ್ರೊ ಪ್ರಯಾಣ ದರದಲ್ಲಿ ಭಾರೀ ಏರಿಕೆಯಾಗಿದೆ. ಇದರ ಬಗ್ಗೆ ಸಾರ್ವಜನಿಕರಿಂದ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಇನ್ನು ಮುಂದೆ ನಮಗೆ ಮೆಟ್ರೊ ಸಹವಾಸವೇ ಬೇಡ ಎನ್ನುತ್ತಿದ್ದಾರೆ. ಇದರ ನಡುವೆ ಈಗ ಮೆಟ್ರೊ ಪ್ರಯಾಣ ದರ ಏರಿಕೆ ಬಗ್ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ನಡುವೆ ಆರೋಪ-ಪ್ರತ್ಯಾರೋಪ ನಡೆಯುತ್ತಿದೆ.

ಬಿಜೆಪಿ ನಾಯಕರು ಮೆಟ್ರೊ ದರ ಏರಿಕೆಗೆ ಕರ್ನಾಟಕ ಸರ್ಕಾರವನ್ನು ದೂಷಿಸುತ್ತಿದ್ದರೆ ಇತ್ತ ಕಾಂಗ್ರೆಸ್ ನಾಯಕರು ಕೇಂದ್ರ ಸರ್ಕಾರವೇ ಕಾರಣ ಎನ್ನುತ್ತಿದ್ದಾರೆ. ಮೆಟ್ರೊ ದರ ಏರಿಕೆ ಬಗ್ಗೆ ಸಂಸದ ತೇಜಸ್ವಿ ಸೂರ್ಯ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಟ್ವೀಟ್ ಗೆ ಅವರನ್ನು ನೆಟ್ಟಿಗರು ಟ್ರೋಲ್ ಮಾಡಿದ್ದಾರೆ. ಮೆಟ್ರೊಗೆ ಜಾಗ, ಕಟ್ಟಲು ಹಣ ಮಾತ್ರ ರಾಜ್ಯ ಸರ್ಕಾರ ಕೊಡುತ್ತದೆ. ಅದರ ನಿಯಂತ್ರಣವೆಲ್ಲಾ ಕೇಂದ್ರದ ಬಳಿಯೇ ಇರುತ್ತದೆ ಎಂದು ಒಬ್ಬರು ಟಾಂಗ್ ಕೊಟ್ಟರೆ ಮತ್ತೊಬ್ಬರು ಮೆಟ್ರೊ ದರ ಏರಿಕೆಗೆ ರಾಜ್ಯ ಸರ್ಕಾರವನ್ನು ಯಾಕೆ ದೂಷಿಸುತ್ತೀರಿ, ನಿಮ್ಮ ಕೇಂದ್ರವನ್ನು ಹೋಗಿ ಕೇಳಿ. ಬಿಎಂಆರ್ ಸಿಎಲ್ ಕಮಿಟಿಯ ದರ ಏರಿಕೆ ಪ್ರಸ್ತಾವನೆಗೆ ಒಪ್ಪಿಗೆ ಕೊಡುವುದು ಕೇಂದ್ರ ಸರ್ಕಾರ. ಕೇಂದ್ರ ಯಾಕೆ ದರ ಏರಿಕೆಯನ್ನು ಒಪ್ಪಿಕೊಂಡಿತು ಎಂದು ಪ್ರಶ್ನೆ ಮಾಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡುವುದನ್ನು ಬಿಟ್ಟು ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ದರ ಕಡಿಮೆ ಮಾಡಿ ಎಂದು ಹಲವರು ಟ್ರೋಲ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಷಪ್ರಾಶನದಿಂದ ಐದು ಹುಲಿಗಳು ಸಾವು ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸಿದ್ದರಾಮಯ್ಯ

ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಮೂರು ಮಂದಿ ಸಾವು, ಹಲವರಿಗೆ ಗಾಯ

ಉತ್ತರಾಖಂಡದ ಬಾಲಿಗಢದಲ್ಲಿ ಭೀಕರ ಮೇಘಸ್ಫೋಟ: ಪ್ರವಾಹದಲ್ಲಿ ಸಿಲುಕಿ 9 ಕಾರ್ಮಿಕರ ಕಣ್ಮರೆ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಮುಂದಿನ ಸುದ್ದಿ
Show comments