Webdunia - Bharat's app for daily news and videos

Install App

ಎಂಪಿ ಟಿಕೆಟ್ ಶಾಮನೂರುಗೆ ಬೇಡ್ವೇ ಬೇಡಂತೆ

Webdunia
ಶುಕ್ರವಾರ, 29 ಮಾರ್ಚ್ 2019 (13:47 IST)
ಲೋಕಸಭಾ ಚುನಾವಣೆಗೆ ಕಣಕ್ಕಿಳಿಯಲು ಶಾಮನೂರು ಶಿವಶಂಕರಪ್ಪ ಹಿಂದೇಟು ಹಾಕಿರುವುದು ಕೈ ಪಾಳೆಯಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ಶಾಮನೂರುಗೆ ಪರ್ಯಾಯವಾಗಿ ಅಭ್ಯರ್ಥಿ ಹುಡುಕಾಟವನ್ನು ಕಾಂಗ್ರೆಸ್ ಶುರುವಿಟ್ಟುಕೊಂಡಿದೆ. ದಾವಣಗೆರೆ ಲೋಕಸಭಾ ಕ್ಷೇತ್ರದ ಅಭ್ಯರ್ಥಿಗೆ ಕೈ ನಾಯಕರಿಂದ ಹುಡುಕಾಟ ನಡೆದಿದೆ. ಈಗಾಗಲೇ ಇಬ್ಬರಿಗೆ ಬುಲಾವ್ ನೀಡಿದ್ದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಂಜಪ್ಪ ಹಾಗೂ ತೇಜಸ್ವಿ ಪಟೇಲ್ ಗೆ ಬೆಂಗಳೂರಿಗೆ ಬರುವಂತೆ ಬುಲಾವ್ ನೀಡಿದ್ದಾರೆ.
ಹೆಚ್.ಬಿ ಮಂಜಪ್ಪ, ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ತೇಜಸ್ವಿ ಪಟೇಲ್, ಜೆ.ಹೆಚ್ ಪಟೇಲ್ ತಮ್ಮನ ಪುತ್ರರಾಗಿದ್ದಾರೆ. ಇಬ್ಬರ ಜೊತೆಯೂ ಚರ್ಚೆ ನಡೆಸಿದ್ದಾರೆ  ದಿನೇಶ್ ಗುಂಡೂರಾವ್.

ಕಳೆದ ಸರ್ಕಾರದ ಅವಧಿಯಲ್ಲಿ ಸಚಿವ ಸ್ಥಾನ‌ಕ್ಕೆ ವಯಸ್ಸಿನ ಕಾರಣ ನೀಡಿ ಸಂಪುಟಕ್ಕೆ ಸೇರಿಸಿಕೊಂಡಿರಲಿಲ್ಲ ಸಿದ್ದರಾಮಯ್ಯ. ಇದೀಗ ಲೋಕಸಭಾ ಚುನಾವಣೆಗೆ ಟಿಕೆಟ್ ನೀಡಲು ವಯಸ್ಸಿನ ಅಡ್ಡಿ ಬರುವುದಿಲ್ಲವೇ ಎಂದು ಅಸಮಾಧಾನಗೊಂಡಿರುವ ಶ್ಯಾಮನೂರು ನಡೆ ಚರ್ಚೆಗೆ ಕಾರಣವಾಗಿದೆ.

ಹಾಗಾಗಿಯೇ ಹೈಕಮಾಂಡ್ ಟಿಕೆಟ್ ಘೋಷಿಸಿದರೂ ನಯವಾಗಿಯೇ ತಿರಸ್ಕರಿಸಿದ್ದಾರೆ ಶ್ಯಾಮನೂರು. ತಮ್ಮ ಪುತ್ರ ಮಲ್ಲಿಕಾರ್ಜುನ್ ಗೆ‌‌ ಕೂಡ ಆಸಕ್ತಿ ಇಲ್ಲಾ ಎಂದು ಶಾಮನೂರು ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments