Publish Date: Sat, 02 Feb 2019 (18:58 IST)
Updated Date: Sat, 02 Feb 2019 (18:59 IST)
ಮಂಡ್ಯ ಲೋಕಸಭೆ ಕ್ಷೇತ್ರದಿಂದ ಮುಂಬರುವ ಚುನಾವಣೆಯಲ್ಲಿ ಟಿಕೆಟ್ ನೀಡುವ ಕುರಿತು ಸಿ ಎಲ್ ಪಿ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಮಂಗಳೂರು ಏರ್ಪೋರ್ಟ್ ನಲ್ಲಿ ಸಿ ಎಲ್ ಪಿ ಲೀಡರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದು, ಸುಮಲತಾಗೆ ಮಂಡ್ಯದಲ್ಲಿ ಲೋಕಸಭಾ ಟಿಕೆಟ್ ನೀಡುವ ಕುರಿತು ಯಾವುದೇ ಚರ್ಚೆ ಆಗಿಲ್ಲ ಎಂದು ಹೇಳಿದ್ದಾರೆ. ಯಾವ ಯಾವ ಕ್ಷೇತ್ರಗಳಲ್ಲಿ ಯಾರಿಗೆ ಟಿಕೆಟ್ ನೀಡಬೇಕೆಂಬ ಬಗ್ಗೆ ಇನ್ನೂ ಚರ್ಚೆ ಮಾಡಿಲ್ಲ. ಯಾವ್ಯಾವ ಕ್ಷೇತ್ರದಲ್ಲಿ ಯಾರು ಗೆಲ್ಲಬಹುದು? ಎಂಬುದನ್ನು ನೋಡಿಕೊಂಡು ಟಿಕೆಟ್ ಹಂಚಿಕೆ ಮಾಡಲಾಗುತ್ತದೆ ಎಂದರು.
ಇನ್ನು ಸಚಿವ ಡಿ.ಕೆ.ಶಿವಕುಮಾರ್ ಗೆ ಇಡಿ ಸಮನ್ಸ್ ಜಾರಿಗೊಳಿಸಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಅಧಿಕಾರಿಗಳು ಯಾವ ರೀತಿ ಕಾನೂನಿನಲ್ಲಿ ಕ್ರಮ ಕೈಗೊಳ್ತಾರೋ ಅದೇ ರೀತಿ ಸಮನ್ಸ್ ನೀಡಿದ್ದಾರೆ. ಐಟಿ, ಇಡಿಯವರಿಗೆ ತನ್ನದೇ ಆದ ಕಾನೂನು ಚೌಕಟ್ಟು ಇದೆ ಎಂದಷ್ಟೇ ಹೇಳಿದರು.