Select Your Language

Notifications

webdunia
webdunia
webdunia
webdunia

ಪಂಚಕಲ್ಯಾಣಿ ಅಭಿವೃದ್ಧಿಗೆ ಸುಧಾಮೂರ್ತಿ ಚಾಲನೆ

ಪಂಚಕಲ್ಯಾಣಿ ಅಭಿವೃದ್ಧಿಗೆ ಸುಧಾಮೂರ್ತಿ ಚಾಲನೆ
ಮಂಡ್ಯ , ಗುರುವಾರ, 31 ಜನವರಿ 2019 (19:14 IST)
ವಿಶ್ವವಿಖ್ಯಾತ ಧಾರ್ಮಿಕ ಕ್ಷೇತ್ರ ಪಂಚಕಲ್ಯಾಣಿ ಹಾಗೂ ಇತರೆ ಪ್ರವಾಸಿ ತಾಣಗಳ ಅಭಿವೃದ್ಧಿ ಕಾಮಗಾರಿಗೆ ಇಂದು ಚಾಲನೆ ನೀಡಲಾಯಿತು.

ಪ್ರತಿಷ್ಠಿತ ಇನ್ಫೋಸಿಸ್ ಕಂಪನಿಯ ಮುಖ್ಯಸ್ಥರಾದ ಸುಧಾಮೂರ್ತಿ ಅವರಿಗೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್.ಪುಟ್ಟರಾಜು ಅಭಿವೃದ್ಧಿಯ ಜವಾಬ್ದಾರಿ ನೀಡಿದ್ದಾರೆ.

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಐತಿಹಾಸಿಕ ಧಾರ್ಮಿಕ ಕ್ಷೇತ್ರ ಮೇಲುಕೋಟೆಯ ಪಂಚ ಕಲ್ಯಾಣಿ ಹಾಗೂ ಇತರೆ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಇಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್.ಪುಟ್ಟರಾಜು, ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಹಾಗೂ ಇನ್ಫೋಸೀಸ್ ಮುಖ್ಯಸ್ಥೆ ಸುಧಾಮೂರ್ತಿ ಸಮ್ಮುಖದಲ್ಲಿ ಚಾಲನೆ ನೀಡಲಾಯಿತು.

ಧಾರ್ಮಿಕ ಕ್ಷೇತ್ರವನ್ನ ಮತ್ತಷ್ಟು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಚಾಲನೆ ಕೊಡುತ್ತಿದ್ದು, ಈ ಸಂದರ್ಭದಲ್ಲಿ ಮಾತನಾಡಿದ ಇನ್ಫೋಸೀಸ್ ಮುಖ್ಯಸ್ಥೆ ಸುಧಾಮೂರ್ತಿ, ಇತ್ತೀಚಿನ ದಿನಗಳಲ್ಲಿ ಒಂದು ಸಾವಿರ ಕೋಟಿ ಖರ್ಚು ಮಾಡಿದರೂ ಕಲ್ಯಾಣಿ ಕಟ್ಟಲು ಸಾಧ್ಯವಿಲ್ಲ. ನಾವು ವಿದೇಶಗಳಲ್ಲಿ ಫೋಟೋ ತೆಗೆದು ಸಾಮಾಜಿಕ ಜಾಲತಾಣಕ್ಕೆ ಹಾಕ್ತೀವಿ. ಆದ್ರೆ ವಿದೇಶಗಳಿಗಿಂತಲೂ ಉತ್ತಮ ಪ್ರವಾಸೋದ್ಯಮ ತಾಣ ಕಲ್ಯಾಣಿ ಎಂದು ಶ್ಲಾಘಿಸಿದರು.



Share this Story:

Follow Webdunia kannada

ಮುಂದಿನ ಸುದ್ದಿ

ಕನ್ನಡ ಶಾಲೆ ಕಟ್ಟಡಕ್ಕೆ ಮರಾಠಿ ಭಾಷಿಕರ ವಿರೋಧ!