Webdunia - Bharat's app for daily news and videos

Install App

ಈ ಕಂಡಿಷನ್ ಮೇರೆಗೆ ರಾಜೀನಾಮೆ ವಾಪಸ್ ಪಡೆಯಲು ನಿರ್ಧರಿಸಿದ ಎಂಟಿಬಿ ನಾಗರಾಜ್

Webdunia
ಭಾನುವಾರ, 14 ಜುಲೈ 2019 (10:58 IST)
ಬೆಂಗಳೂರು : ಮೈತ್ರಿ ಸರ್ಕಾರದ ಅತೃಪ್ತ ಶಾಸಕರಲ್ಲೊಬ್ಬರಾದ ಎಂಟಿಬಿ ನಾಗರಾಜ್ ಅವರು ಕಂಡಿಷನ್ ಒಂದರ ಮೇರೆಗೆ ರಾಜೀನಾಮೆ ವಾಪಸ್ ಪಡೆಯಲು ನಿರ್ಧರಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.




ಸಿದ್ದರಾಮಯ್ಯ ಅವರ ಕಾವೇರಿ ನಿವಾಸದಲ್ಲಿ ನಡೆದ ಮೈತ್ರಿಪಕ್ಷಗಳ ನಾಯಕರ ಸಭೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಹೊಸಕೋಟೆ ಶಾಸಕ ಎಂಟಿಬಿ ನಾಗರಾಜ್, ನನ್ನ ಜೊತೆ ರಾಜೀನಾಮೆ ನೀಡಿದ ಡಾ| ಕೆ. ಸುಧಾಕರ್ ಅವರು ರಾಜೀನಾಮೆ ವಾಪಾಸ್ ಪಡೆದರೆ ನಾನು ವಾಪಸ್ ಪಡೆಯುತ್ತೇನೆ. ನಾನು ಹಾಗೂ ಸುಧಾಕರ್ ಒಟ್ಟಿಗೆ ರಾಜೀನಾಮೆ ನೀಡಿದ್ದರಿಂದ ಇಬ್ಬರೂ ಸೇರಿಯೇ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ.


ಅಲ್ಲದೇ ನಾಳೆ ಮಧ್ಯಾಹ್ನದೊಳಗೆ ಸುಧಾಕರ್ ಅವರನ್ನು ಸಂಪರ್ಕಿಸಿ ಅವರ ಮನವೊಲಿಸುತ್ತೇನೆ. ಆ ಬಳಿಕ ಇಬ್ಬರೂ ಒಟ್ಟಿಗೆ ಸೇರಿ ಸೋಮವಾರ ರಾಜೀನಾಮೆ ಹಿಂಪಡೆಯುತ್ತೇವೆ. ಒಂದು ವೇಳೆ ಸುಧಾಕರ್ ಅವರು ರಾಜೀನಾಮೆ ವಾಪಸ್ ಪಡೆಯಲು ನಿರಾಕರಿಸಿದರೆ ತಾನೊಬ್ಬನೇ ಕಾಂಗ್ರೆಸ್​ನಲ್ಲಿದ್ದು ಏನ್ ಮಾಡಲಿ ಎಂದು ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments