Webdunia - Bharat's app for daily news and videos

Install App

ಸಿಎಂ ಕುಮಾರಸ್ವಾಮಿ, ರೇವಣ್ಣ ವಿರುದ್ಧ ಗರಂ ಆದ ಎಂಟಿಬಿ ನಾಗರಾಜ್. ಕಾರಣವೇನು?

Webdunia
ಶನಿವಾರ, 13 ಜುಲೈ 2019 (13:25 IST)
ಬೆಂಗಳೂರು : ಈಗಾಗಲೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಚಿವ ಎಂಟಿಬಿ ನಾಗರಾಜ್ ಅವರ ಮನೆಗೆ ಸಚಿವ ಡಿಕೆ ಶಿವಕುಮಾರ್ ಅವರು ಬೆಳಿಗ್ಗೆ ಸುಮಾರು 5 ಗಂಟೆಗೆ ಭೇಟಿ ನೀಡಿ ಮಾತುಕತೆ ನಡೆಸಿ ಅವರ ಮನವೊಲಿಸಲು ಕಸರತ್ತು ನಡೆಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.




ಈ ವೇಳೆ ಮಾತನಾಡಿದ ಸಚಿವ ಎಂಟಿಬಿ ನಾಗರಾಜ್, ‘ಮೈತ್ರಿ ಬೇಕಾಗಿರುವುದು ನಿಮಗೆ, ದೇವೇಗೌಡರ ಕುಟುಂಬಕ್ಕೆ, ಡಿಸಿಎಂ ಪರಮೇಶ್ವರ್ ಗೆ. ನಾನು ಹೆಸರಿಗಷ್ಟೇ ಸಚಿವನಾಗಿದ್ದೇನೆ. ವಸತಿ ಇಲಾಖೆಯಲ್ಲಿ ಸಿಎಂ ಕುಮಾರಸ್ವಾಮಿ, ರೇವಣ್ಣ ಹಸ್ತಕ್ಷೇಪ ಮಾಡ್ತಿದ್ದಾರೆ. ನನಗೆ ಗೊತ್ತಿಲ್ಲದೆ ನನ್ನ ಇಲಾಖೆ ಅಧಿಕಾರಿಗಳ ವರ್ಗಾವಣೆ ಮಾಡಿದ್ದಾರೆ . ರಾಜೀವ್ ವಸತಿ ಯೋಜನೆಯ ಕೆಲಸ ಅರ್ಧಕ್ಕೆ ನಿಂತಿದೆ. ಸಾವಿರಾರು ಕೋಟಿ ರೂಪಾಯಿ ಬಿಡುಗಡೆ ಮಾಡಬೇಕಿತ್ತು. ಸಿಎಂ ಬಳಿ ಈ ಬಗ್ಗೆ ಕೇಳಿದರೂ ಪ್ರತಿಕ್ರಿಯೆ ನೀಡಿಲ್ಲ’ ಎಂದು ಸಿಎಂ ಕುಮಾರಸ್ವಾಮಿ, ರೇವಣ್ಣ ವಿರುದ್ಧ ಎಂಟಿಬಿ ನಾಗರಾಜ್ ಗರಂ ಆಗಿದ್ದಾರೆ.


ಈಗಾಗಲೇ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದೇನೆ. ಹೀಗಾಗಿ ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ ಎಂದು ಅವರು  ಡಿಕೆಶಿ ಅವರಿಗೆ ತಿಳಿಸಿದ್ದಾರೆ.


ಇದಕ್ಕೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ಈ ಬಾರಿ ನನ್ನ ಮನವಿಯನ್ನು ಒಪ್ಪಿಕೊಳ್ಳಿ. ನಾನೇ ಮುಂದೆ ನಿಂತು ನಿಮ್ಮ ಸಮಸ್ಯೆಯನ್ನು ಪರಿಹರಿಸುತ್ತೇನೆ. ಸಿಎಂ ಕುಮಾರಸ್ವಾಮಿ, ರೇವಣ್ಣ ಬಳಿ ನಾನೇ ಮಾತನಾಡುತ್ತೇನೆ ಎಂದು ಮನವಿ ಮಾಡಿದ್ದರೂ ಕೂಡ ಎಂಟಿಬಿ ನಾಗರಾಜ್ ಮನವೊಲಿಸಲು ಡಿಕೆಶಿ ವಿಫಲರಾಗಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments