ಮುಡಾದಲ್ಲಿ ಮತ್ತೊಂದು ಹಗರಣ: 3 ಸಾವಿರ ರೂ ಗೆ ಜಮೀನು, 300 ಕೋಟಿ ನಷ್ಟ

Krishnaveni K
ಶನಿವಾರ, 7 ಡಿಸೆಂಬರ್ 2024 (09:23 IST)
ಮೈಸೂರು: ಮುಡಾದ ಮತ್ತೊಂದು ಹಗರಣ ಬಯಲಾಗಿದ್ದು ಸರ್ಕಾರದ ಬೊಕ್ಕಸಕ್ಕೆ ಬರೋಬ್ಬರಿ 300 ಕೋಟಿ ರೂ. ನಷ್ಟವಾಗಿದೆ ಎಂದು ತಿಳಿದುಬಂದಿದೆ. 23 ನಿವೇಶನಗಳನ್ನು 3,000 ರೂ. ಗೆ ಮಾರಾಟ ಮಾಡಲಾಗಿದೆ ಎಂದು ಮುಡಾ ವಿರುದ್ಧ ಆರೋಪ ಕೇಳಿಬಂದಿದೆ.

ಮುಡಾ ಮಾಜಿ ಆಯುಕ್ತ ದಿನೇಶ್ ಮತ್ತು ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸೇರಿಕೊಂಡು ಅಕ್ರಮ ಎಸಗಿದ್ದಾರೆ ಎಂದು ತಿಳಿದುಬಂದಿದೆ. ಈ ಇಬ್ಬರೂ ಇಡಿ ಮುಂದೆ ವಿಚಾರಣೆಗೆ ಹಾಜರಾಗಿದ್ದರು. ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಗೆ 23 ನಿವೇಶನಗಳನ್ನು ಕೇವಲ 3,000 ರೂ.ಗೆ ಐದೇ ದಿನದಲ್ಲಿ ದಿನೇಶ್ ಮಾಡಿಸಿಕೊಟ್ಟಿದ್ದರು ಎಂದು ತಿಳಿದುಬಂದಿದೆ.

ಮಂಜುನಾಥ್ ಗೆ ಯಾವ ನಿವೇಶನ ಕಳೆದುಕೊಂಡಿದ್ದಕ್ಕೆ ಬದಲಾಗಿ ನಿವೇಶನ ನೀಡಿದ್ದಾರೆ ಎಂಬ ಬಗ್ಗೆ ಉಲ್ಲೇಖವಿಲ್ಲ. ಪ್ರೋತ್ಸಾಹದಾಯಕವಾಗಿ ಸೈಟು ನೀಡಿರುವುದಾಗಿ ದಾಖಲೆ ತೋರಿಸಲಾಗಿದೆ. 5 ಲಕ್ಷ ರೂ. ಶುಲ್ಕ ಪಾವತಿ ಮಾಡಬೇಕಾದಲ್ಲಿ ಕೇವಲ 600 ರೂ. ಎಂದು ನಮೂದು ಮಾಡಲಾಗಿದೆ.

ಇದು ಮುಡಾದ ಬ್ರಹ್ಮಾಂಡ ಭ್ರಷ್ಟಾಚಾರ ಯಾವ ಮಟ್ಟಿಗಿದೆ ಎನ್ನುವುದನ್ನು ತೋರಿಸುತ್ತದೆ. ಸಾಮಾನ್ಯರು ಭೂಮಿ ಕಳೆದುಕೊಂಡರೂ ಪರಿಹಾರವಾಗಿ ಪಡೆಯಲು ಹರಸಾಹಸ ಪಡೆಯಬೇಕಾಗುತ್ತದೆ. ಆದರೆ ಇಲ್ಲಿ ಲಕ್ಷಾಂತರ ಬೆಲೆ ಬಾಳುವ ಜಮೀನನ್ನು ಜುಜುಬಿ ಬೆಲೆಗೆ ನೀಡಿರುವುದು ಇಲ್ಲಿನ ಭ್ರಷ್ಟಾಚಾರಕ್ಕೆ ಹಿಡಿದ ಕೈ ಗನ್ನಡಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ನಿವಾಸಿಗಳಿಗೆ ಗುಡ್‌ನ್ಯೂಸ್‌: ನ.1ರಿಂದಲೇ ಬಿಖಾತಾದಿಂದ ಎ ಖಾತಾ ಪರಿವರ್ತನೆ ಅಭಿಯಾನ

ಜಾತಿವಾರು ಸಮೀಕ್ಷೆಗೆ ಮಾಹಿತಿ ನೀಡಲು ನಾರಾಯಣಮೂರ್ತಿ ಕುಟುಂಬ ಹಿಂದೇಟು: ಕಾರಣ ಏನು ಗೊತ್ತಾ

ಕೊಪ್ಪಳದಲ್ಲಿ ರೈತರಿಗೆ ಸಲಹೆ ನೀಡಿದ ಸಚಿವೆ ನಿರ್ಮಲಾ ಸೀತಾರಾಮನ್, ಹೇಳಿದ್ದೇನು ಗೊತ್ತಾ

ಕೇದಾರನಾಥ ಯಾತ್ರಿಗಳಿಗೆ ಗುಡ್‌ನ್ಯೂಸ್‌ ಕೊಟ್ಟ ಅದಾನಿ ಸಮೂಹ, ಇಲ್ಲಿದೆ ಮಾಹಿತಿ

ನನ್ನನ್ನು ಸರ್ ಎಂದು ಕರೆಯಬೇಡಿ, ಬಿಹಾರದ ಮಹಿಳಾ ಕಾರ್ಯಕರ್ತೆಗೆ ಮೋದಿ ಹೀಗೇ ಹೇಳೋದಾ

ಮುಂದಿನ ಸುದ್ದಿ
Show comments