Webdunia - Bharat's app for daily news and videos

Install App

ಮುಡಾ ಪ್ರಕರಣ: ವಿಚಾರಣೆಗೆ ಸಹಕರಿಸದ ಮಾಜಿ ಆಯುಕ್ತ ನಟೇಶ್ ಇಡಿ ವಶಕ್ಕೆ

Sampriya
ಮಂಗಳವಾರ, 29 ಅಕ್ಟೋಬರ್ 2024 (19:02 IST)
Photo Courtesy X
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಡಾ ಮಾಜಿ ಆಯುಕ್ತ ನಟೇಶ್‌ ಅವರನ್ನು ಇ.ಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ವಿಚಾರಣೆಗೆ ಸಹಕರಿಸದ ಹಿನ್ನೆಲೆ ಅವರನ್ನು ವಶಕ್ಕೆ ಪಡೆದು ಶಾಂತಿನಗರ ಇಡಿ ಕಚೇರಿಗೆ ಅಧಿಕಾರಿಗಳು ಕರೆದೊಯ್ದಿದ್ದಾರೆ.

ಇನ್ನೂ ಪ್ರಕರಣ ಸಂಬಂಧ ನಟೇಶ್ ಅವರನ್ನು ಬಂಧಿಸುವ ಸಾಧ್ಯತೆಯು ಹೆಚ್ಚಾಗಿದೆ. ಸಮುಡಾದಿಂದ 50:50 ಅನುಪಾತದಲ್ಲಿ 928 ನಿವೇಶನಗಳ ಅಕ್ರಮ ಹಂಚಿಕೆಯಾಗಲು ಪ್ರಾಧಿಕಾರದ ಹಿಂದಿನ ಆಯುಕ್ತರಾಗಿದ್ದ ಡಿ.ಬಿ.ನಟೇಶ್‌ ಕಾರಣ ಎಂದು ಗಂಭೀರ ಆರೋಪವಿದೆ.

ಈ ಹಿನ್ನೆಲೆಯಲ್ಲಿ ನಟೇಶ್‌ ಮನೆ ಮೇಲೆ ಸೋಮವಾರ ದಾಳಿ ಮಾಡಿ ಇ.ಡಿ ವಿಚಾರಣೆಗೆ ಒಳಪಡಿಸಿತ್ತು. ಆದರೆ, ತನಿಖೆಗೆ ನಟೇಶ್‌ ಅವರು ಸಹಕರಿಸಿಲ್ಲ ಎನ್ನಲಾಗಿದೆ.

ಈ ಪ್ರಕರಣದಲ್ಲಿ ತನ್ನದೇನು ತಪ್ಪಿಲ್ಲ. ಸರ್ಕಾರದ ಆದೇಶದಂತೆ ಕೆಲಸ ಮಾಡಿದ್ದೇನೆ. ನನಗೆ ಕಾರ್ತಿಕ್ ಲೇಔಟ್ ನಿರ್ಮಾಣ ಸಂದರ್ಭದಲ್ಲಿ ಆದ ಬೆಳವಣಿಗೆ ಗೊತ್ತಿಲ್ಲ. ಬಿಲ್ಡರ್ ಮಂಜುನಾಥ್ ಕಾನೂನಾತ್ಮಕವಾಗಿ ಲೇಔಟ್ ನಿರ್ಮಾಣ ಮಾಡಿದ್ದಾರೆ. 50:50 ಅನುಪಾತದಲ್ಲಿ ಯಾವುದೇ ಅವ್ಯವಹಾರವನ್ನೂ ಮಾಡಿಲ್ಲ. ಸರ್ಕಾರದ ನಡಾವಳಿಯಲ್ಲಿಯೇ ಇದೆ ಶೇ. 50:50 ಅನುಪಾತದಲ್ಲಿ ನೀಡಲಾಗಿದೆ. 2022 ಮತ್ತು 2023 ರಲ್ಲಿ ನಡಾವಳಿ ಬದಲಾವಣೆ ಆಗಿದೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments