Webdunia - Bharat's app for daily news and videos

Install App

ಸಿಎಂ ಸಿದ್ದರಾಮಯ್ಯ ವಿಚಾರಣೆ ಬೆನ್ನಲ್ಲೇ ಮುಡಾ ಸಭೆ: ಮಹತ್ವದ ನಿರ್ಧಾರದಿಂದ ಸೈಟು ಪಡೆದವರಿಗೆ ಟೆನ್ಷನ್

Krishnaveni K
ಗುರುವಾರ, 7 ನವೆಂಬರ್ 2024 (16:13 IST)
ಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಸೈಟು ಅಕ್ರಮವಾಗಿ ಪಡೆದಿರುವ ಆರೋಪದ ಬಗ್ಗೆ ವಿಚಾರಣೆ ನಡೆದ ಬೆನ್ನಲ್ಲೇ ಇಂದು ಸಭೆ ನಡೆಸಲಾಗಿದ್ದು ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

ಅಕ್ರಮ ಬೆಳಕಿಗೆ ಬಂದ ಬಳಿಕ ಮುಡಾ ಇಂದು ಇದೇ ಮೊದಲ ಬಾರಿಗೆ ಸಭೆ ನಡೆಸಿದೆ. ಈ ಸಭೆಯಲ್ಲಿ 50:50 ಅನುಪಾತದ ಅಡಿಯಲ್ಲಿ ನೀಡಲಾದ ಸೈಟು ಜಪ್ತಿ ಮಾಡಲು ತೀರ್ಮಾನಿಸಲಾಗಿದೆ. ಇದರಿಂದಾಗಿ 50:50 ಅನುಪಾತದಲ್ಲಿ ಸೈಟು ಪಡೆದವರಿಗೆ ಸೈಟು ಕಳೆದುಕೊಳ್ಳುವ ಟೆನ್ಷನ್ ಶುರುವಾಗಿದೆ.

ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಪಿಎನ್ ದೇಸಾಯಿ ನೇತೃತ್ವದ ಸಮಿತಿ ವರದಿ ಬಳಿಕ ಸೈಟು ಜಪ್ತಿ ಮಾಡಲು ಸಭೆಯಲ್ಲಿ ಒಮ್ಮತದ ನಿರ್ಧಾರ ಕೈಗೊಳ್ಳಲಾಗಿದೆ. ಸಭೆಯ ಬಳಿಕ ಮಾತನಾಡಿದ ಶಾಸಕ ಜಿಟಿ ದೇವೇಗೌಡ ’50:50 ಅನುಪಾತ ವಾಪಸ್ ಪಡೆಯಬೇಕು, ಅಕ್ರಮವಾಗಿರುವುದನ್ನು  ರದ್ದು ಮಾಡಬೇಕು. ಕಾನೂನಾತ್ಮಕವಾಗಿರುವವರಿಗೆ ನೀಡಬೇಕು ಎಂದು ತೀರ್ಮಾನಿಸಲಾಗಿದೆ’ ಎಂದಿದ್ದಾರೆ.

ರಾಜ್ಯ ಸರ್ಕಾರದ್ದು ಇದೇ ಪ್ಲ್ಯಾನ್ ಆಗಿತ್ತು. 50:50 ಅನುಪಾತದಲ್ಲಿ ನೀಡಲಾಗಿದ್ದ ಎಲ್ಲಾ ಸೈಟುಗಳನ್ನು ವಾಪಸ್ ಪಡೆಯಲು ನಗರಾಭಿವೃದ್ಧಿ ಕಾರ್ಯದರ್ಶಿಗಳಿಗೆ ಸ್ವತಃ ಸಿಎಂ ಸಿದ್ದರಾಮಯ್ಯ ಲಿಖಿತ ಆದೇಶ ನೀಡಿದ್ದರು. ಕಳೆದ ನಾಲ್ಕು ವರ್ಷಗಳಲ್ಲಿ 1,500 ಕ್ಕೂ ಹೆಚ್ಚು 50:50 ಅನುಪಾತದಡಿಯಲ್ಲಿ ಸೈಟು ಹಂಚಿಕೆಯಾಗಿದೆ. ಇವೆಲ್ಲವೂ ಜಪ್ತಿಯಾಗುವ ಸಾಧ್ಯತೆಯಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ದಲಿತ ವಿರೋಧಿಯಲ್ಲ, ತಪ್ಪಾಗಿದ್ದರೆ ಕ್ಷಮಿಸಿ ಎಂದ ಜಿಟಿ ದೇವೇಗೌಡ

ಬಿಜೆಪಿ ಮತಕಳ್ಳತನದಿಂದ ಅಧಿಕಾರ ಉಳಿಸಿಕೊಂಡಿದೆ: ಪ್ರಿಯಾಂಕಾ ಗಾಂಧಿ ಕಿಡಿ

ಮಹಾತ್ಮ ಗಾಂಧೀಜಿ ಮೇಲೂ ಆರ್‌ಎಸ್‌ಎಸ್ ಅದೇ ತಂತ್ರವನ್ನು ಹೆಣೆದಿತ್ತು: ರಾಹುಲ್ ಗಾಂಧೀಜಿ

ಬೀದಿ ನಾಯಿ ಪ್ರಕರಣದಲ್ಲಿ ಸುಪ್ರೀಂ ತೀರ್ಪುನ ಬಳಿಕ ಕ್ರಮಕ್ಕೆ ಮುಂದಾದ ಸರ್ಕಾರ

ಕಲಾಸಿಪಾಳ್ಯ: ಕೇಸರಿ ಶಾಲು ಧರಿಸಿದ್ದಕ್ಕೆ ಹಿಗ್ಗಾಮುಗ್ಗಾ ಥಳಿತ, ತನಿಖೆಯಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments