Webdunia - Bharat's app for daily news and videos

Install App

ಮುಡಾ ಹಗರಣ ಹೋರಾಟ: ಬಿಜೆಪಿ ಪ್ರಮುಖ ನಾಯಕರ ಬಂಧನ

Krishnaveni K
ಶುಕ್ರವಾರ, 12 ಜುಲೈ 2024 (13:08 IST)
ಬೆಂಗಳೂರು: ಮೈಸೂರು ಮುಡಾ ಹಗರಣವನ್ನು ಖಂಡಿಸಿ ‘ಮೈಸೂರು ಚಲೋ’ ನಡೆಸಲು ನಗರದಿಂದ ಹೊರಟ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ, ಮಾಜಿ ಸಚಿವ ಮುನಿರತ್ನ, ಪಕ್ಷದ ಪ್ರಮುಖರು, ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.

ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರು ಹರಸಾಹಸ ಮಾಡಿದರು. ಬೆಳಿಗ್ಗೆಯೇ ಬಿಜೆಪಿಯ ಕೆಲವು ನಾಯಕರ ಮನೆಯ ಮುಂದೆ ಪೊಲೀಸ್ ಸರ್ಪಗಾವಲು ಹಾಕಲಾಗಿತ್ತು. ಈ ಬಗ್ಗೆ ಕರ್ನಾಟಕ ಬಿಜೆಪಿ ತೀವ್ರ ಟೀಕೆ ವ್ಯಕ್ತಪಡಿಸಿತ್ತು. ನಮ್ಮನ್ನು ಹತ್ತಿಕ್ಕಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿತ್ತು.

ಪ್ರತಿಭಟನೆಯನ್ನು ಹತ್ತಿಕ್ಕುವ ಕೆಲಸ ಇದು ಎಂದು ಇದೇವೇಳೆ ವಿಜಯೇಂದ್ರ ಅವರು ಟೀಕಿಸಿದರು. ಕಾರ್ಯಕರ್ತರು ಕಾಂಗ್ರೆಸ್ ಸರಕಾರಕ್ಕೆ ಧಿಕ್ಕಾರ ಕೂಗಿದರು. ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ನೂಕಾಟ, ತಳ್ಳುವಿಕೆ ನಡೆಯಿತು.

ಹೋರಾಟವನ್ನು ಹತ್ತಿಕ್ಕುವ ಏಕೈಕ ಉದ್ದೇಶದಿಂದ ಈ ಸರಕಾರವು ಇಂದು ಬೆಳಗ್ಗೆ 7 ಗಂಟೆಗೇ ನಮ್ಮ ಮುಖಂಡರನ್ನು ಬಂಧಿಸಿದೆ. ನೈಸ್ ರಸ್ತೆ ಬಳಿ ನಮ್ಮ ಬ್ಯಾನರ್, ಬಾವುಟಗಳನ್ನು ಕಿತ್ತು ಬಿಸಾಕಿ, ಕಾರ್ಯಕರ್ತರಿಗೆ ಕೊಡಲು ತಂದ ತಿಂಡಿಯನ್ನೂ ಒದ್ದು ಬಿಸಾಕಿದ್ದಾರೆ ಎಂದು ವಿಜಯೇಂದ್ರ ಅವರು ಆಕ್ಷೇಪ ವ್ಯಕ್ತಪಡಿಸಿದರು.
 
 
 
 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ 25 ಮೀಟರ್‌ಗಳಷ್ಟು ಜಾರಿದ ಬಸ್ ತಲೆಕೆಳಗಾಗಿ ಪಲ್ಟಿ, ಭಯಾನಕ ಅಪಘಾತದ ದೃಶ್ಯ ಕ್ಯಾಮೆರಾದಲ್ಲಿ ಸೆರೆ

ತಮ್ಮ ಇಲಾಖೆಯಲ್ಲಿ ಆಗುವ ತಪ್ಪುಗಳಿಗೆ ಹೊಣೆ ಹೊರಬೇಕು ಎಂಬ ಸಂದೇಶ ಸಿಕ್ಕಿದೆ: ಜಿ ಪರಮೇಶ್ವರ್

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೆನ್ನಲ್ಲೇ ಪಂಜಾಬ್‌ನಲ್ಲಿ ಬಿಜೆಪಿ, ಎಎಪಿ ನಡುವೆ ಹೊಸ ಸಂಘರ್ಷ

ಸ್ಕ್ವಾಷ್ ಪ್ರಶಸ್ತಿ ಗೆದ್ದು ಇತಿಹಾಸ ನಿರ್ಮಿಸಿದ ಅನಹತ್ ಸಿಂಗ್ ಸಾಧನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪೋಸ್ಟ್‌

ಯುವಜನತೆ ಬೀದಿಗಳಿಂದ ಸಂಸತ್ತಿನವರೆಗೆ ಹೋರಾಡಿ ಮೋದಿಜಿಯನ್ನು ಸೋಲಿಸಿದರು

ಮುಂದಿನ ಸುದ್ದಿ
Show comments