ಮುಡಾ ಹಗರಣ: ಸಿಎಂನವರೇ ಕನ್ನಡರಿಗರ ಕೆಲ ಪ್ರಶ್ನೆಗಳಿಗೆ ಉತ್ತರ ಕೊಡಿ: ಆರ್‌ ಅಶೋಕ್

Sampriya
ಮಂಗಳವಾರ, 6 ಆಗಸ್ಟ್ 2024 (14:51 IST)
ಬೆಂಗಳೂರು: ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರಿಂದ ಕನ್ನಡಿಗರು ಕೆಲ ಪ್ರಶ್ನೆಗಳಿಗೆ ಉತ್ತರದ ನಿರೀಕ್ಷೆಯಲ್ಲಿದ್ದಾರೆ. ಸಿಎಂ ಅವರು ಈ ಕೆಳಗಿನ ಪ್ರಶ್ನೆಗಳಿಗೆ ಉತ್ತರ ನೀಡಿ ಎಂದು ವಿಪಕ್ಷ ನಾಯಕ ಆರ್‌ ಅಶೋಕ್ ಅವರು ಕೇಳಿದ್ದಾರೆ.

ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಆರ್‌ ಅಶೋಕ್ ಅವರು ಸಿಎಂಗೆ ಕೆಲ ಪ್ರಶ್ನೆಗಳನ್ನು ಕೇಳಿದ್ದಾರೆ.

ಸಿಎಂ ಸಿದ್ದರಾಮಯ್ಯನವರೇ, 1.) 2013ರ ಚುನಾವಣಾ ಅಫಿಡವಿಟ್ ನಲ್ಲಿ ತಮ್ಮ ಪತ್ನಿಯ ಆಸ್ತಿ ಉಲ್ಲೇಖ ಮಾಡದೆ ತಪ್ಪು ಮಾಹಿತಿ ನೀಡುತ್ತೀರಿ. ನಂತರ 2018ರಲ್ಲಿ ಅದರ ಮಾರುಕಟ್ಟೆ ಮೌಲ್ಯ ₹25 ಲಕ್ಷ ಎಂದು ನಮೂದಿಸಿದ್ದೀರಿ. 5 ವರ್ಷಗಳಾದ ಮೇಲೆ ದಿಢೀರನೆ ಆಸ್ತಿ ಹೊಂದಿರುವ ಬಗ್ಗೆ ಜ್ಞಾನೋದಯವಾಯಿತು?

2.) ಈಗ ಹಗರಣ ಬೆಳಕಿಗೆ ಬಂದಮೇಲೆ ₹63 ಕೋಟಿ ಕೊಡಿ ಸೈಟು ಬಿಟ್ಟುಕೊಡುತ್ತೇನೆ ಎಂದು ಹೇಳುತ್ತೀರಿ. 2018ರಲ್ಲಿ ₹25 ಲಕ್ಷ ಇದ್ದ ಆಸ್ತಿ ಮೌಲ್ಯ, 2024ರಲ್ಲಿ ₹63 ಕೋಟಿ ಆಗಲು ಹೇಗೆ ಸಾಧ್ಯ? ಇದೇನಾದರೂ ರಾಹುಲ್‌ಗಾಂಧಿ  ಅವರ ಆಲೂಗಡ್ಡೆ ಹಾಕಿ ಚಿನ್ನ ತೆಗೆಯುವ ಯೋಜನೆಯ ಭಾಗವಾ?

3.) 50:50ರ ಅನುಪಾತದಲ್ಲಿ ಅಭಿವೃದ್ಧಿಪಡಿಸಿದ ನಿವೇಶನಗಳನ್ನು ಪರಿಹಾರ ರೂಪದಲ್ಲಿ ಕೊಡುವುದು ಬೇಡ ಎಂದು ನಗರಾಭಿವೃದ್ಧಿ ಇಲಾಖೆ ಆದೇಶವಿದ್ದರೂ ಅದನ್ನ ಉಲ್ಲಂಘಿಸಿ ಮೂಡಾ ಅಧ್ಯಕ್ಷ ಮರಿಗೌಡ ಅವರು ಹಗರಣದ ಬಾಗಿಲನ್ನು ತೆಗೆದಿದ್ದು ಏಕೆ? ಇದರ ಹಿಂದೆ ಯಾವ ಪ್ರಭಾವಿ ಶಕ್ತಿ ಕೆಲಸ ಮಾಡುತ್ತಿತ್ತು?<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕದನ ವಿರಾಮಕ್ಕೆ ಒಪ್ಪಿದ ಪಾಕಿಸ್ತಾನ–ಅಫ್ಗಾನಿಸ್ತಾನ: ಮಧ್ಯಸ್ಥಿಕೆ ವಹಿಸಿದ್ದ ಕತಾರ್ ಹೇಳಿದ್ದೇನು

ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮುಂದಿನ ನಾಲ್ಕು ದಿನ ಮಳೆಯ ಅಬ್ಬರ: ಮೀನುಗಾರರಿಗೆ ವಾರ್ನಿಂಗ್‌

ಕೆಲಸ ಹುಡುಕಿ ನಗರಕ್ಕೆ ಬಂದಿದ್ದ ಯುವಕ ಅನುಮಾನಸ್ಪದ ಸಾವು

ಬೆಳಗಾವಿ: ಮನೆಯಿಂದ ಕೊಳೆತ ವಾಸನೆ, ಬಾಗಿಲು ತೆರೆದಾಗ ಮಾಜಿ ಪತಿ ಪೊಲೀಸಪ್ಪನ ಕೃತ್ಯ ಬಟಾಬಯಲು

ರಾಜ್ಯಸಭಾ ಸದಸ್ಯರ ಅಪಾರ್ಟ್‌ಮೆಂಟ್‌ನಲ್ಲಿ ಭಾರೀ ಬೆಂಕಿ ಅವಘಡ, ನಿವಾಸಿ ಹೇಳಿದ್ದೇನು

ಮುಂದಿನ ಸುದ್ದಿ
Show comments