Webdunia - Bharat's app for daily news and videos

Install App

ಮುಡಾ ಹಗರಣ, ಸಿಎಂ ಸಿದ್ದರಾಮಯ್ಯಗೆ ಮತ್ತೇ ರಿಲೀಫ್

Sampriya
ಸೋಮವಾರ, 2 ಸೆಪ್ಟಂಬರ್ 2024 (17:03 IST)
ಬೆಂಗಳೂರು:  ಮುಡಾ ಹಗರಣ ಪ್ರಕರಣಕ್ಕೆ ಸಂಬಂಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ನೀಡಿರುವ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್​ ಮತ್ತೆ ಮುಂದೂಡಿದೆ.

ರಾಜ್ಯಪಾಲರ ಆದೇಶ ವಜಾಗೊಳಿಸಬೇಕು ಎಂದು ಸಿಎಂ ಸಲ್ಲಿಸಿದ್ದ ಅರ್ಜಿ ವಿಚಾರಣೆ 2ನೇ ಬಾರಿಗೆ ಮುಂದೂಡಿಕೆಯಾಗಿದೆ. ಮುಂದಿನ ವಿಚಾರಣೆ ಸೆಪ್ಟೆಂಬರ್ 9ರಂದು ಮಧ್ಯಾಹ್ನ  2:30ಕ್ಕೆ ಹೈಕೋರ್ಟ್‌  ವಿಚಾರಣೆ ನಡೆಸಲಿದೆ.

ನ್ಯಾಯಮೂರ್ತಿ ನಾಗಪ್ರಸನ್ನ ಅವರು ಹೇಳಿದಂತೆ ಇದೀಗ ಈ ಪ್ರಕರಣ ಅಂತಿ ಹಂತಕ್ಕೆ ತಲುಪಿದ್ದು, ಸೆಪ್ಟೆಂಬರ್ 12ರಂದು ಅರ್ಜಿ ವಿಚಾರಣೆ ಪೂರ್ಣಗೊಳ್ಳಲಿದೆ.

ತಮ್ಮ ವಿರುದ್ಧ ರಾಜ್ಯಪಾಲರು ತನಿಖೆಗೆ ಒಪ್ಪಿಗೆ ಸೂಚಿಸಿ ಆದೇಶ ಹೊರಡಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ  ಹೈಕೋರ್ಟ್‌ನಲ್ಲಿ ಒಂದು ವಾರಗಳ ಬಳಿಕ ಮಧ್ಯಂತರ ರಿಲೀಫ್‌ ಸಿಕ್ಕಿದೆ.

ಸಿಎಂ ವಿರುದ್ಧ ತನಿಖೆಗೆ ಆದೇಶಿಸಿ ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಪ್ರಶ್ನಿಸಿ ಸಿಎಂ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ವೇಳೆ ಸಿಎಂ ಪರ ವಕೀಲರು ಮತ್ತು ಸಾಲಿಸಿಟರ್ ಜನರಲ್ ಮಂಡಿಸಿದ ಸುದೀರ್ಘ ವಾದದ ಬಳಿಕ ಇಂದು ದೂರುದಾರ ಸ್ನೇಹಮಯಿ ಕೃಷ್ಣ ಪರ ಕೆ.ಜಿ.ರಾಘವನ್ ವಾದಮಂಡಿಸಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಜ್ಜಿ, ಕೆಮ್ಮು ಇರೋರೆಲ್ಲಾ ಇಲ್ಲಿದ್ದಾರೆ.. ನನ್ನ ಬೇರೆ ಸೆಲ್ ಗೆ ಹಾಕಿ: ಪ್ರಜ್ವಲ್ ರೇವಣ್ಣ ಬೇಡಿಕೆ

ಫೋನ್ ನಲ್ಲಿ ಬ್ಯುಸಿ… ಗಂಡನ ಬೈಕ್ ಬಿಟ್ಟು ಬೇರೆ ಯುವಕನ ಬೈಕ್ ಏರಿದ ಮಹಿಳೆ: ಮುಂದೇನಾಯ್ತು Funny video

ಕಾಸರಗೋಡಿನಲ್ಲಿ ಟ್ಯಾಂಕ್ಗಾಗಿ ಗುಂಡಿ ಅಗೆಯುತ್ತಿದ್ದಾಗ ಮನೆ ಅಡಿಯಲ್ಲಿ ಬೃಹತ್ ಸುರಂಗ ಪತ್ತೆ Video

ಭಿಕ್ಷೆ ಕೊಡದಿದ್ದರೆ ಬೇಡ ಹಿಂಸೆ ಮಾಡೋದು ಸರೀನಾ.. ಬಡ ಬಾಲಕನ ಬಳಿ ಕಾರಿನ ಚಾಲಕನ ದರ್ಪ: ಕರುಣಾಜನಕ ವಿಡಿಯೋ

ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆ ಬಿಸಿ ಗ್ಯಾರಂಟಿ: ಶೀಘ್ರದಲ್ಲೇ ಬಸ್ ಪ್ರಯಾಣ ದರ ಏರಿಕೆ ಸಾಧ್ಯತೆ

ಮುಂದಿನ ಸುದ್ದಿ
Show comments