Webdunia - Bharat's app for daily news and videos

Install App

ಮುಡಾ ಕೇಸ್ ನಲ್ಲಿ ಸಿದ್ದರಾಮಯ್ಯ ಅಮಾಯಕ, ಕುಟುಂಬಸ್ಥರು ಸಂತ್ರಸ್ತರು

Krishnaveni K
ಭಾನುವಾರ, 9 ಫೆಬ್ರವರಿ 2025 (11:10 IST)
ಬೆಂಗಳೂರು: ಮೈಸೂರು ಅಭಿವೃದ್ಧಿ ಪ್ರಾಧಿಕಾರ ಹಗರಣದ ತನಿಖೆ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಪತ್ನಿ ಪಾರ್ವತಿ ಅಮಾಯಕರು ಎಂದಿರುವುದಲ್ಲದೆ, ಅವರೇ ನಿಜವಾದ ಸಂತ್ರಸ್ತರು ಎಂದು ವರದಿ ಕೊಟ್ಟಿದೆ ಎನ್ನಲಾಗಿದೆ.

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ತನಿಖೆ ನಡೆಸಿದ್ದರು. ಈ ತನಿಖೆಯ ವರದಿ ಸೋರಿಕೆಯಾಗಿದ್ದು, ಮುಖ್ಯಮಂತ್ರಿ ಮತ್ತು ಅವರ ಪತ್ನಿ ಪಾರ್ವತಿಗೆ ಕ್ಲೀನ್ ಚಿಟ್ ನೀಡಲಾಗಿದೆ ಎಂದು ಈಗಾಗಲೇ ಹೇಳಲಾಗಿತ್ತು. ಇದೀಗ ಮತ್ತಷ್ಟು ವಿವರಗಳು ಹೊರಬಿದ್ದಿದೆ.

ಪ್ರಕರಣದಲ್ಲಿ ನಿಜವಾದ ಸಂತ್ರಸ್ತರು ಸಿಎಂ ಕುಟುಂಬ ಎಂದು ಲೋಕಾಯುಕ್ತರು ವರದಿ ನೀಡಿರುವುದಾಗಿ ಹೇಳಲಾಗಿದೆ. ಸಿಎಂ ತಮ್ಮ ಪ್ರಭಾವ ಬಳಸಿ ಸೈಟು ಪಡೆದುಕೊಂಡಿಲ್ಲ. ಹಾಗೆಯೇ ಅವರ ಪತ್ನಿಯ ಗಮನಕ್ಕೂ ಬಾರದೇ ಕೆಲವು ಪತ್ರಗಳ ವ್ಯವಹಾರವಾಗಿದೆ. ಇದರಲ್ಲಿ ಸಿಎಂ ಮತ್ತು ಅವರ ಪತ್ನಿಯ ತಪ್ಪಿಲ್ಲ. ಕೆಲವು ಅಧಿಕಾರಿಗಳು ಮಾಡಿದ ಎಡವಟ್ಟಿನಿಂದಲೇ ಈ ರೀತಿ ಆಗಿದೆ ಎಂದು ಲೋಕಾ ವರದಿಯಲ್ಲಿ ಉಲ್ಲೇಖವಾಗಿದೆ ಎನ್ನಲಾಗಿದೆ.

ಮುಡಾದಿಂದ ಮೈಸೂರು ವಿಜಯನಗರದ 3 ಮತ್ತು 4 ನೇ ಹಂತಗಳಲ್ಲಿ ವಿವಿಧ ಅಳತೆಯ ಒಟ್ಟು 14 ಸೈಟುಗಳನ್ನು ಸಿಎಂ ಕುಟುಂಬಕ್ಕೆ ನೀಡಲಾಗಿತ್ತು. ಇದನ್ನು ಸಿಎಂ ಪ್ರಭಾವ ಬಳಸಿ ಪಡೆಯಲಾಗಿದೆ ಎಂಬುದು ಆರೋಪವಾಗಿತ್ತು. ಇದೀಗ ಸಿಎಂ ಕುಟುಂಬವೇ ನಿಜವಾದ ಸಂತ್ರಸ್ತರು ಎಂದು ವರದಿ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments