Webdunia - Bharat's app for daily news and videos

Install App

ಅಳೆದು ತೂಗಿ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲು: ಎಫ್ಐಆರ್ ವಿವರ ಇಲ್ಲಿದೆ

Sampriya
ಶುಕ್ರವಾರ, 27 ಸೆಪ್ಟಂಬರ್ 2024 (16:06 IST)
ಮೈಸೂರು:  ಮುಡಾ ಹಗರಣದಲ್ಲಿ ಕೊನೆಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಸಿದ್ದರಾಮಯ್ಯ ಅವರೇ ಪ್ರಕರಣದ ಎ1 ಆರೋಪಿಯಾಗಿದ್ದು, ಅವರ ಪತ್ನಿ ಪಾರ್ವತಿ ಅವರು ಎ2 ಆರೋಪಿಯಾಗಿದ್ದಾರೆ.

ಮುಡಾ ಹಗರಣ ಸಂಬಂಧ ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡಿ ಹೈಕೋರ್ಟ್ ತೀರ್ಪಿನ ಬಳಿಕ ಇದೀಗ ಸಿದ್ದರಾಮಯ್ಯ ಹಾಗೂ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.  ಸಿದ್ದರಾಮಯ್ಯ ಭಾಮೈದ ಮಲ್ಲಿಕಾರ್ಜುನಸ್ವಾಮಿ ಎ3, ಭೂ ಮಾಲೀಕ ದೇವರಾಜು ಎ4 ಹಾಗೂ ಇತರರ ಮೇಲೆ ದಾಖಲಾಗಿದೆ.  ಕೋರ್ಟ್ ಆದೇಶದಂತೆ ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಾಗಿದೆ. ಮೈಸೂರು ಲೋಕಾಯುಕ್ತ ಎಸ್‌ಪಿ ಅವರು ಪ್ರಕರಣ ದಾಖಲಿಸಿಕೊಂಡಿದ್ದಾರೆ.  

ದೂರುದಾರರು ನ್ಯಾಯಾಲಯಕ್ಕೆ ನೀಡಿದ ಮಾಹಿತಿಯಂತೆ, ಯಾವುದನ್ನು ಕಡೆಗಣಿಸಿದೆ ಎಲ್ಲ ಅಂಶಗಳನ್ನು ಸೇರಿಸಿಕೊಂಡು ಇದೀಗ ಎಫ್‌ಐಆರ್ ದಾಖಲಾಗಿದೆ. ತನಿಖೆ ವೇಳೆ ಪ್ರಕರಣದಲ್ಲಿ ಆರೋಪಿಗಳ ಪಾತ್ರದ ಮೇಲೆ ಅವರ ಸ್ಥಾನ ಬದಲಾಗುವ ಸಾಧ್ಯತೆಯಿದೆ.

ಸಿದ್ದರಾಮಯ್ಯ ಅವರ 40 ವರ್ಷದ ಸುದೀರ್ಘ ರಾಜಕೀಯ ಜೀವನದಲ್ಲಿ ಇದೀಗ ಅವರ ವಿರುದ್ಧ ಮೊದಲ ಪ್ರಕರಣ ದಾಖಲಾಗಿದೆ. ಮೊದಲ ಭಾರೀ ಗಂಭೀರ ಸೆಕ್ಷನ್‌ ಅಡಿಯಲ್ಲಿ ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments