ಧಾರವಾಡ: ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ಗೆ ಇಡಿ ಸಮನ್ಸ್ಗೆ ತಡೆಯಾಜ್ಞೆಯನ್ನು ವಿಸ್ತರಣೆ ಮಾಡುವ ಮೂಲಕ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.
ಇಂದು ಅರ್ಜಿ ವಿಚಾರಣೆ ನಡೆಸಿದ ಧಾರವಾಡ ಹೈಕೋರ್ಟ್ ನ್ಯಾ. ನಾಗಪ್ರಸನ್ನ ಅವರು 10 ದಿನಗಳ ಕಾಲ ಸಿಎಂ ಪತ್ನಿ ಮತ್ತು ಬೈರತಿ ಸುರೇಶ್ ಅವರಿಗೆ ಹಾಜರಾತಿಯಿಂದ ವಿನಾಯಿತಿ ನೀಡಿ ಆದೇಶ ಪ್ರಕಟಿಸಿದರು.
ಫೆಬ್ರವರಿ 20ಕ್ಕೆ ಅರ್ಜಿ ವಿಚಾರಣೆ ಮುಂದೂಡಿಕೆಯಾಗಿದ್ದು ಅಲ್ಲಿಯವರೆಗೆ ಇಬ್ಬರಿಗೂ ಮಧ್ಯಂತರ ರಕ್ಷಣೆ ಮುಂದುವರಿಯಲಿದೆ.
ಸಿಎಂ ಪತ್ನಿ ಪಾರ್ವತಿ ಹಾಗೂ ಸಚಿವ ಬೈರತಿ ಸುರೇಶ್ಗೆ ಹೈಕೋರ್ಟ್ ಮಧ್ಯಂತರ ರಕ್ಷಣೆ ಮುಂದುವರಿದಿದೆ. ಇಬ್ಬರಿಗೂ ಜಾರಿಯಾಗಿದ್ದ ಸಮನ್ಸ್ ಪ್ರಶ್ನಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ನಾಗಪ್ರಸನ್ನ ಪೀಠ, ಫೆಬ್ರವರಿ 10ಕ್ಕೆ ವಿಚಾರಣೆ ಮುಂದೂಡಿದೆ.
ಹೀಗಾಗಿ ಫೆ.20ರ ರವರೆಗೆ ಇಡಿ ಸಮನ್ಸ್ ಗೆ ತಡೆಯಾಜ್ಞೆ ವಿಸ್ತರಣೆಯಾಗಿದೆ. ಇದರಿಂದ ಸಿಎಂ ಪತ್ನಿ ಹಾಗೂ ಭೈರತಿ ಸುರೇಶ್ಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.