Select Your Language

Notifications

webdunia
webdunia
webdunia
webdunia

ಪತ್ತೆ ಹಚ್ಚಲು ವಿಫಲವಾಯ್ತು ಮುಧೋಳ ಶ್ವಾನ?

ಪತ್ತೆ ಹಚ್ಚಲು ವಿಫಲವಾಯ್ತು ಮುಧೋಳ ಶ್ವಾನ?
ಚಾಮರಾಜನಗರ , ಶುಕ್ರವಾರ, 22 ಜುಲೈ 2022 (11:39 IST)
ಚಾಮರಾಜನಗರ : ಪ್ರಧಾನಿ ನರೇಂದ್ರ ಮೋದಿ ಅವರು ಮನ್ ಕಿ ಬಾತ್ನಲ್ಲಿ ದೇಶಿ ತಳಿ ಮುಧೋಳ ಶ್ವಾನವನ್ನು ಸೈನ್ಯದಲ್ಲಿ, ಭದ್ರತೆಯಲ್ಲಿ, ಅರಣ್ಯದಲ್ಲಿ ಬಳಸಲು ಕರೆಕೊಟ್ಟಿದ್ರು.

ಅವರ ಮಾತಿನಿಂದ ಪ್ರೇರಣೆಗೊಂಡ ಬಂಡೀಪುರ ಅರಣ್ಯ ಅಧಿಕಾರಿಗಳು, ಈ ಪ್ರದೇಶದಲ್ಲಿ ಕಳ್ಳಬೇಟೆ ಪತ್ತೆ ಹಚ್ಚಲು ಮುಧೋಳ ತಳಿಯ ಶ್ವಾನವನ್ನು ತರಲಾಗಿತ್ತು. ಆದ್ರೆ ಬೇಟೆಗೆ ಮಾತ್ರ ನಿಸ್ಸೀಮವಾಗಿರುವ ಮುಧೋಳ ತಳಿ ಶ್ವಾನ ಕಳ್ಳಬೇಟೆ ಪತ್ತೆ ಹಚ್ಚಲು ವಿಫಲವಾಗಿದೆ.

ಕಳ್ಳಬೇಟೆ ಪತ್ತೆಹಚ್ಚಲು ಕಳೆದ ಒಂದೂವರೆ ವರ್ಷದ ಹಿಂದೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಮುಧೋಳ ತಳಿಯ ಶ್ವಾನವನ್ನು ಕರೆತರಲಾಗಿತ್ತು.

ಈ ಶ್ವಾನಕ್ಕೆ ‘ಮಾರ್ಗರೇಟ್’ ಎಂದು ಹೆಸರಿಡಲಾಗಿತ್ತು. ಆ ಬಳಿಕ ಈ ಶ್ವಾನಕ್ಕೆ ಎಲ್ಲಾ ರೀತಿಯ ತರಬೇತಿಯನ್ನು ಕೂಡ ನೀಡಲಾಗಿತ್ತು. ಆದರೆ ಇದೂವರೆಗೂ ಒಂದು ಕಳ್ಳತನವನ್ನು ಸಹ ಪತ್ತೆಹಚ್ಚಲು ಈ ಮಾರ್ಗರೇಟ್ನಿಂದ ಸಾಧ್ಯವಾಗಿಲ್ಲ.

ಮುಧೋಳ ಶ್ವಾನ ಅರಣ್ಯಧಿಕಾರಿಗಳು ಚಿಂತಿಸಿದ್ದ ಮಟ್ಟಿಗೆ ಕೆಲಸ ಮಾಡುತ್ತಿಲ್ಲ. ಹೀಗಾಗಿ ಈ ಶ್ವಾನವನ್ನು ಕೇವಲ ಬೋನಿನಲ್ಲಿರಿಸಿದ್ದಾರೆ. ಹೀಗಾಗಿ ಮೊದಲಿದ್ದ ಜರ್ಮನ್ ಶೆಫರ್ಡ್ ಅಥವಾ ಬೆಲ್ಜಿಯಂ ತಳಿಯ ಶ್ವಾನವನ್ನು ತರಲು ಅರಣ್ಯಧಿಕಾರಿಗಳು ಚಿಂತನೆ ನಡೆಸಿದ್ದಾರೆ. 

 


Share this Story:

Follow Webdunia kannada

ಮುಂದಿನ ಸುದ್ದಿ

ವಿದ್ಯಾರ್ಥಿಗಳ ವಿರುದ್ಧ ಪೋಕ್ಸೋ ಕೇಸ್‌! ಏನಿದು ಕಿಸ್ಸಿಂಗ್ ಕೇಸ್?