Webdunia - Bharat's app for daily news and videos

Install App

ಪತ್ತೆ ಹಚ್ಚಲು ವಿಫಲವಾಯ್ತು ಮುಧೋಳ ಶ್ವಾನ?

Webdunia
ಶುಕ್ರವಾರ, 22 ಜುಲೈ 2022 (11:39 IST)
ಚಾಮರಾಜನಗರ : ಪ್ರಧಾನಿ ನರೇಂದ್ರ ಮೋದಿ ಅವರು ಮನ್ ಕಿ ಬಾತ್ನಲ್ಲಿ ದೇಶಿ ತಳಿ ಮುಧೋಳ ಶ್ವಾನವನ್ನು ಸೈನ್ಯದಲ್ಲಿ, ಭದ್ರತೆಯಲ್ಲಿ, ಅರಣ್ಯದಲ್ಲಿ ಬಳಸಲು ಕರೆಕೊಟ್ಟಿದ್ರು.

ಅವರ ಮಾತಿನಿಂದ ಪ್ರೇರಣೆಗೊಂಡ ಬಂಡೀಪುರ ಅರಣ್ಯ ಅಧಿಕಾರಿಗಳು, ಈ ಪ್ರದೇಶದಲ್ಲಿ ಕಳ್ಳಬೇಟೆ ಪತ್ತೆ ಹಚ್ಚಲು ಮುಧೋಳ ತಳಿಯ ಶ್ವಾನವನ್ನು ತರಲಾಗಿತ್ತು. ಆದ್ರೆ ಬೇಟೆಗೆ ಮಾತ್ರ ನಿಸ್ಸೀಮವಾಗಿರುವ ಮುಧೋಳ ತಳಿ ಶ್ವಾನ ಕಳ್ಳಬೇಟೆ ಪತ್ತೆ ಹಚ್ಚಲು ವಿಫಲವಾಗಿದೆ.

ಕಳ್ಳಬೇಟೆ ಪತ್ತೆಹಚ್ಚಲು ಕಳೆದ ಒಂದೂವರೆ ವರ್ಷದ ಹಿಂದೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಮುಧೋಳ ತಳಿಯ ಶ್ವಾನವನ್ನು ಕರೆತರಲಾಗಿತ್ತು.

ಈ ಶ್ವಾನಕ್ಕೆ ‘ಮಾರ್ಗರೇಟ್’ ಎಂದು ಹೆಸರಿಡಲಾಗಿತ್ತು. ಆ ಬಳಿಕ ಈ ಶ್ವಾನಕ್ಕೆ ಎಲ್ಲಾ ರೀತಿಯ ತರಬೇತಿಯನ್ನು ಕೂಡ ನೀಡಲಾಗಿತ್ತು. ಆದರೆ ಇದೂವರೆಗೂ ಒಂದು ಕಳ್ಳತನವನ್ನು ಸಹ ಪತ್ತೆಹಚ್ಚಲು ಈ ಮಾರ್ಗರೇಟ್ನಿಂದ ಸಾಧ್ಯವಾಗಿಲ್ಲ.

ಮುಧೋಳ ಶ್ವಾನ ಅರಣ್ಯಧಿಕಾರಿಗಳು ಚಿಂತಿಸಿದ್ದ ಮಟ್ಟಿಗೆ ಕೆಲಸ ಮಾಡುತ್ತಿಲ್ಲ. ಹೀಗಾಗಿ ಈ ಶ್ವಾನವನ್ನು ಕೇವಲ ಬೋನಿನಲ್ಲಿರಿಸಿದ್ದಾರೆ. ಹೀಗಾಗಿ ಮೊದಲಿದ್ದ ಜರ್ಮನ್ ಶೆಫರ್ಡ್ ಅಥವಾ ಬೆಲ್ಜಿಯಂ ತಳಿಯ ಶ್ವಾನವನ್ನು ತರಲು ಅರಣ್ಯಧಿಕಾರಿಗಳು ಚಿಂತನೆ ನಡೆಸಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಆಗಿ ಸಿದ್ದರಾಮಯ್ಯ 5 ವರ್ಷ ಪೂರ್ಣಗೊಳಿಸುತ್ತಾರೆ: ಡಾ.ಯತೀಂದ್ರ

ಭಾರೀ ಮಳೆಯ ಮುನ್ಸೂಚನೆ: 24ಗಂಟೆಗಳ ಕಾಲ ಚಾರ್‌ ಧಮ್ ಯಾತ್ರೆ ಸ್ಥಗಿತ

ಪ್ರತಿ ವರ್ಷವೂ ಯೋಗ ದಿನ ಅಂದುಕೊಂಡದಕ್ಕಿಂತ ವಿಶೇಷವಾಗಿರುತ್ತದೆ: ಪ್ರಧಾನಿ ಮೋದಿ ಮೆಚ್ಚುಗೆ

ವಿಷಪ್ರಾಶನದಿಂದ ಐದು ಹುಲಿಗಳು ಸಾವು ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸಿದ್ದರಾಮಯ್ಯ

ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಮೂರು ಮಂದಿ ಸಾವು, ಹಲವರಿಗೆ ಗಾಯ

ಮುಂದಿನ ಸುದ್ದಿ
Show comments