Select Your Language

Notifications

webdunia
webdunia
webdunia
webdunia

ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ಹಗರಣ: ನಾಗೇಂದ್ರಗೆ 14 ದಿನಗಳ ನ್ಯಾಯಾಂಗ ಬಂಧನ

 B. Nagendra

Sampriya

ಬೆಂಗಳೂರು , ಸೋಮವಾರ, 22 ಜುಲೈ 2024 (14:04 IST)
ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬ್ಯಾಂಕ್ ಖಾತೆಯಿಂದ ₹95 ಕೋಟಿ ಮೊತ್ತವನ್ನು ಅಕ್ರಮವಾಗಿ ವರ್ಗಾವಣೆ ಪ್ರಕರಣ ಆರೋಪಿ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೋಮವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು.

ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗೇಂದ್ರ ಅವರನ್ನು ಬಿಗಿ ಪೊಲೀಸ್ ಭದ್ರತೆಯಲ್ಲಿ, ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯದ (ಸಿಸಿಎಚ್-82) ನ್ಯಾಯಾಧೀಶ ಸಂತೋಷ ಗಜಾನನ ಭಟ್‌ ಅವರ ಮುಂದೆ ಬೆಳಗ್ಗೆ 11.30ಕ್ಕೆ ಹಾಜರುಪಡಿಸಲಾಯಿತು.

ವಿಚಾರಣೆ ವೇಳೆ ಪ್ರಾಸಿಕ್ಯೂಷನ್ ಪರ ಹಾಜರಾದ ಇ.ಡಿ ವಕೀಲ ಪಿ.ಪ್ರಸನ್ನ ಕುಮಾರ್ ಅವರು, ಪ್ರಕರಣದ ಮತ್ತೊಬ್ಬ ಆರೋಪಿಯಾಗಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಹೈದರಾಬಾದ್‌ನ ಸತ್ಯನಾರಾಯಣ ವರ್ಮ ಅವರನ್ನು ಬಾಡಿ ವಾರಂಟ್ ಮುಖಾಂತರ ವಶಕ್ಕೆ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದರು.

ಈ ಅರ್ಜಿಯನ್ನು ಮಾನ್ಯ ‌ಮಾಡಿದ ನ್ಯಾಯಾಧೀಶರು ಆರೋಪಿ ಸತ್ಯನಾರಾಯಣ ವರ್ಮ ಅವರನ್ನು ಮಂಗಳವಾರ (ಜುಲೈ 23) ಕೋರ್ಟ್‌ಗೆ ಹಾಜರುಪಡಿಸುವಂತೆ ಆದೇಶಿಸಿದರು. ಅಂತೆಯೇ, ನಾಗೇಂದ್ರ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಮುಖ್ಯಮಂತ್ರಿ ಹುದ್ದೆಗೆ ರಾಹುಲ್ ಗಾಂಧಿಗೆ ಸಿದ್ದರಾಮಯ್ಯ ಕೊಟ್ಟಿದ್ದೆಷ್ಟು: ಆರ್ ಅಶೋಕ್ ನೀಡಿದ ಲೆಕ್ಕ