Select Your Language

Notifications

webdunia
webdunia
webdunia
webdunia

ಅತೃಪ್ತ ಶಾಸಕರ ಮನವೊಲಿಸಲು ಹೋಟೆಲ್ ಗೆ ಬಂದ ಡಿಕೆ ಶಿವಕುಮಾರ್ ರನ್ನು ತಡೆದ ಮುಂಬೈ ಪೊಲೀಸರು

ಅತೃಪ್ತ ಶಾಸಕರ ಮನವೊಲಿಸಲು ಹೋಟೆಲ್ ಗೆ ಬಂದ ಡಿಕೆ ಶಿವಕುಮಾರ್ ರನ್ನು ತಡೆದ ಮುಂಬೈ ಪೊಲೀಸರು
ಮುಂಬೈ , ಬುಧವಾರ, 10 ಜುಲೈ 2019 (10:21 IST)
ಮುಂಬೈ : ಕಾಂಗ್ರೆಸ್, ಜೆಡಿಎಸ್ ಅತೃಪ್ತ ಶಾಸಕರ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕರು ತಂಗಿದ್ದ ಹೋಟೆಲ್ ಬಳಿಗೆ ಸಚಿವ ಡಿಕೆ ಶಿವಕುಮಾರ್ ಅವರು ಆಗಮಿಸಿದ್ದು, ಆದರೆ ಈ ವೇಳೆ ಡಿಕೆಶಿ ಅವರನ್ನು ಪೊಲೀಸರು ಹೋಟೆಲ್ ಒಳಗಡೆ ಬಿಡಲು ನಿರಾಕರಿಸಿದ್ದಾರೆ.




ಅತೃಪ್ತ ಶಾಸಕರು ಮುಂಬೈನ ರಿನೈಸೆನ್ಸ್ ಹೋಟೆಲ್ ನಲ್ಲಿ ತಂಗಿದ್ದರಿಂದ ಅವರ ಮನವೊಲಿಸಲು ಸಚಿವ ಡಿಕೆ ಶಿವಕುಮಾರ್, ಶಿವಲಿಂಗೇಗೌಡ, ಜಿಟಿ ದೇವೆಗೌಡರು ಹೋಟೆಲ್ ಬಳಿಗೆ ಆಗಮಿಸಿದ್ದರು. ಈ ವೇಳೆ ಅವರನ್ನು ತಡೆದ ಪೊಲೀಸರು ನಿಮ್ಮ ಹೆಸರಲ್ಲಿ ರೂಮ್ ಬುಕ್ ಆಗಿದ್ದರೆ ಮಾತ್ರ ಪ್ರವೇಶ ನೀಡುವುದಾಗಿ ತಿಳಿಸಿದ್ದಾರೆ.


ಇದೇ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ, ನನ್ನ ಸ್ನೇಹಿತರು ಈ ಹೋಟೆಲ್‍ ನಲ್ಲಿದ್ದಾರೆ. ಅವರನ್ನು ಭೇಟಿ ಮಾಡಲು ಬಂದಿದ್ದೇನೆ ಹೊರತು ಯಾರಿಗೂ ನಾನು ಬೆದರಿಕೆ ಹಾಕಲು ಬಂದಿಲ್ಲ. ಹೋಟೆಲ್ ಒಳಗೆ ಬಿಡದಿದ್ದರೆ ಇಡೀ ದಿನ ಇಲ್ಲೇ ಕಾಯ್ತೀನಿ ಎಂದು ಹೇಳಿದ್ದಾರೆ.

 
 

Share this Story:

Follow Webdunia kannada

ಮುಂದಿನ ಸುದ್ದಿ

ವಿಮಾನ ನಿಲ್ದಾಣದಲ್ಲಿ ಬ್ಯಾಗ್ ವೈಟ್ ಸರಿದೂಗಿಸಲು ವ್ಯಕ್ತಿಯೊಬ್ಬ ಮಾಡಿದ್ದೇನು ಗೊತ್ತಾ?