Webdunia - Bharat's app for daily news and videos

Install App

ಏಕವಚನದಲ್ಲಿ ನಗರಸಭೆ ಅಧಿಕಾರಿ-ಸದಸ್ಯರ ಜಟಾಪಟಿ

Webdunia
ಶನಿವಾರ, 28 ಜುಲೈ 2018 (17:48 IST)
ಸಚಿವರಿಗೆ ಹಮ್ಮಿಕೊಂಡಿದ್ದ ಪೌರ ಸನ್ಮಾನ ಕಾರ್ಯಕ್ರಮದ ವೇಳೆ ನಗರಸಭೆ ಸದಸ್ಯರೊಂದಿಗೆ ಅಲ್ಲಿನ ಕಿರಿಯ ಇಂಜಿನಿಯರ್ ಒಬ್ಬರು ಅಸಭ್ಯವಾಗಿ ವರ್ತಿಸಿದ ಘಟನೆ ಚಾಮರಾಜನಗರದಲ್ಲಿ ನಡೆದಿದೆ.

ಚಾಮರಾಜನಗರ ನಗರಸಭೆ ವತಿಯಿಂದ ಸ್ಥಳೀಯ ಶಾಸಕರೂ, ಹಿಂದುಳಿದ ವರ್ಗಗಳ ಸಚಿವರೂ ಆದ ಸಿ.ಪುಟ್ಟರಂಗಶೆಟ್ಟಿ ಅವರಿಗೆ ಪೌರ ಸನ್ಮಾನ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮ ಮುಗಿಯುತ್ತಿದ್ದಂತೆ ನಗರಸಭೆ ವ್ಯಾಪ್ತಿಯ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದ ಸಭೆ ಆರಂಭವಾಯ್ತು. ವೇಳೆ ನಗರಸಭಾ ಸದಸ್ಯ ಚಿನ್ನಸ್ವಾಮಿ, ಅಲ್ಲಿನ ಕಿರಿಯ ಇಂಜಿನಿಯರ್ ಬಸವರಾಜು ಅವರನ್ನು ಅಭಿವೃದ್ಧಿ ಕೆಲಸಕ್ಕೆ ಸಂಬಂಧಿಸಿದಂತೆ ಪ್ರಶ್ನೆ ಮಾಡಿದ್ರು.

ವೇಳೆ ಜೆಇ ಬಸವರಾಜ್ ಸಹ ನಗರಸಭಾ ಸದಸ್ಯರೊಂದಿಗೆ ವಾಗ್ದಾಳಿಗೆ ಇಳಿದಿದ್ದು, ಏಕವಚನದಲ್ಲೇ ನಿಂದಿಸಿದ್ದಾರೆ. ಕುರಿತಂತೆ ನಗರಸಭಾ ಸದಸ್ಯ ಚಿನ್ನಸ್ವಾಮಿ ಪ್ರತಿಕ್ರಿಯಿಸಿ, ಜೆಇ ಬಸವರಾಜ್ ಮಾನಸಿಕ ಸ್ಥಿಮಿತತೆ ಕಳೆದುಕೊಂಡಿರುವ ವ್ಯಕ್ತಿ. ಆತ ಸೋಮಾರಿ ಅವರನ್ನು ಇಲ್ಲಿಂದ ಬೇರೆಡೆ ವರ್ಗ ಮಾಡ್ಬೇಕೆಂದು ಜಿಲ್ಲಾಧಿಕಾರಿಗೆ ಆಗ್ರಹಿಸಿದ್ರು. ಕಿರಿಯ ಇಂಜಿನಿಯರ್ ಬಸವರಾಜ್ ಸಹ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ನಗರಸಭೆ ಸದಸ್ಯರು ನನ್ನನ್ನ ಬೈಯ್ದಿದ್ದರಿಂದ ನಾನೂ ಬೈದಿದ್ದೇನೆ ಎಂದಿದ್ದಾರೆ.



 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments