Webdunia - Bharat's app for daily news and videos

Install App

ಮುನಿರತ್ನ ರಾಸಲೀಲೆ ಬಗ್ಗೆ ಮತ್ತೊಂದು ಗಂಭೀರ ಆರೋಪ ಮಾಡಿದ ಸಂತ್ರಸ್ತೆ

Krishnaveni K
ಗುರುವಾರ, 26 ಸೆಪ್ಟಂಬರ್ 2024 (16:20 IST)
ಬೆಂಗಳೂರು: ಲೈಂಗಿಕ ಕಿರುಕುಳ, ರೇಪ್ ಕೇಸ್ ನಲ್ಲಿ ಬಂಧಿತರಾಗಿರುವ ಶಾಸಕ ಮುನಿರತ್ನ ವಿರುದ್ಧ ಸಂತ್ರಸ್ತ ಮಹಿಳೆ ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ.

ಬಿಜೆಪಿ ಶಾಸಕ ಮುನಿರತ್ನ ಪ್ರಕರಣದ ವಿಚಾರಣೆ ನಡೆಸಲು ರಾಜ್ಯ ಸರ್ಕಾರ ಎಸ್ಐಟಿ ರಚನೆ ಮಾಡಿದೆ.  ಇದೀಗ ಮಹಿಳೆಯ ದೂರು ಆಧರಿಸಿ ಮುನಿರತ್ನರನ್ನು ಎಸ್ಐಟಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಇದರ ನಡುವೆ ಅವರ ಮೇಲಿದ್ದ ಜೀವ ಬೆದರಿಕೆ, ಜಾತಿನಿಂದನೆ ಪ್ರಕರಣದಲ್ಲಿ ಅವರಿಗೆ ಜಾಮೀನು ಸಿಕ್ಕಿದೆ.

ಆದರೆ ಲೈಂಗಿಕ ಕಿರುಕುಳ ಕೇಸ್ ಅವರಿಗೆ ಬಿಗಿಯಾಗುತ್ತಿದೆ. ತನ್ನ ಮೇಲೆ ಶಾಸಕ ಮುನಿರತ್ನ, ವಿಧಾನಸೌಧ, ವಿಕಾಸಸೌಧ ಮತ್ತು ಸರ್ಕಾರೀ ಕಾರಿನಲ್ಲೂ ಅತ್ಯಾಚಾರವೆಸಗಿದ್ದಾರೆ ಎಂದು ಸಂತ್ರಸ್ತೆ ಹೇಳಿಕೆ ನೀಡಿದ್ದಾಳೆ. ಪ್ರಜಾಪ್ರಭುತ್ವದ ದೇವಾಲಯ ಎಂದೇ ಕರೆಸಿಕೊಳ್ಳುವ ವಿಧಾನಸೌಧದಲ್ಲೂ ಮುನಿರತ್ನ ರೇಪ್ ಮಾಡಿದ್ದಾರೆ ಎಂಬ ಆರೋಪ ನಿಜಕ್ಕೂ ಶಾಕಿಂಗ್ ಆಗಿದೆ.

ಸಂತ್ರಸ್ತೆ ಮಾಡಿರುವ ಆರೋಪಗಳನ್ನಿಟ್ಟುಕೊಂಡು ಪೊಲೀಸರು ಮುನಿರತ್ನರನ್ನು ವಿಚಾರಣೆ ನಡೆಸುತ್ತಿದ್ದಾರೆ. ನಾಳೆ ಮುನಿರತ್ನ ಪುರುಷತ್ವ ಪರೀಕ್ಷೆಗೊಳಪಡುವ ಸಾಧ್ಯತೆಯಿದೆ. ಸಂತ್ರಸ್ತೆ ವಿಡಿಯೋ ಕಾಲ್ ಮಾಡಿ ಬೆತ್ತಲಾಗುವಂತೆ ಒತ್ತಾಯ ಮಾಡಿದ್ದರು ಎನ್ನಲಾದ ಮೊಬೈಲ್ ಬಗ್ಗೆ ಪೊಲೀಸರು ಪ್ರಶ್ನೆ ಮಾಡಿದ್ದು ಇದು ಕಳುವಾಗಿದೆ ಎಂದು ಮುನಿರತ್ನ ಹೇಳಿದ್ದಾರೆ. ಆದರೆ ಮೊಬೈಲ್ ಐಎಂಇಐ ನಂಬರ್ ಪಡೆದು ಶೋಧ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್- ಇರಾನ್ ಸಂಘರ್ಷ: ವಿಮಾನಗಳ ಹಾರಾಟ ಸ್ಥಗಿತದಿಂದ ಸಂಕಷ್ಟಕ್ಕೆ ಸಿಲುಕಿದ 18 ಕನ್ನಡಿಗರು

Video: ಪ್ರಿಯಾಂಕಾ ಗಾಂಧಿ ಉದ್ಘಾಟನೆ ಮಾಡಬೇಕೆನ್ನುವಷ್ಟರಲ್ಲಿ ಬಿದ್ದೇ ಹೋಯ್ತು ಫಲಕ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಚುರುಕುಗೊಂಡ ಮುಂಗಾರು: ಮುಂದಿನ ಮೂರು ದಿನ ವರುಣ ಅಬ್ಬರ, ಆರು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಏರ್‌ ಇಂಡಿಯಾ ದುರಂತ ಬೆನ್ನಲ್ಲೇ ಕೇದಾರನಾಥ ಬಳಿ ಹೆಲಿಕಾಪ್ಟರ್ ಅಪಘಾತ: ಪೈಲಟ್ ಸೇರಿ 7 ಮಂದಿ ಸಾವು

ಮುಂದಿನ ಸುದ್ದಿ