ಆರ್ ಆರ್ ನಗರದಲ್ಲಿ ಮುನಿರತ್ನ ನಾಮಪತ್ರ ಸಲ್ಲಿಕೆ

Webdunia
ಸೋಮವಾರ, 17 ಏಪ್ರಿಲ್ 2023 (20:00 IST)
ಹೈ ವೋಲ್ಟೇಜ್ ಕ್ಷೇತ್ರಗಳಲ್ಲಿ ‌ಒಂದೆನಿಸಿರುವ ಆರ್ ಆರ್ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಇಂದು ನಾಮಪತ್ರ ಸಲ್ಲಿಸಿದ್ರು.. ಬೆಳಗ್ಗೆ 9.20 ಕ್ಕೆ ಜೆ ಪಿ ಪಾರ್ಕ್  ವಾರ್ಡ್ ನಲ್ಲಿರುವ ಚೌಡೇಶ್ವರಿ ದೇವಸ್ಥಾನ ಕ್ಕೆ ಆಗಮಿಸಿ ಪೂಜೆ ಸಲ್ಲಿಸಿ, ದೇವಿಯ ದರ್ಶನ ಪಡೆದ್ರು. ನಂತರ ಪಟಾಕಿ ಸಿಡಿಸಿ ಸಂಭ್ರಮಿಸಿದ ನೂರಾರು ಕಾರ್ಯಕರ್ತರು ಬೈಕ್ ಗಳಲ್ಲಿ ಯಶವಂತ ಪುರ ಮಾರ್ಗವಾಗಿ ,ಗೊರಗುಂಟೆ ಪಾಳ್ಯ, ಲಗ್ಗೆರಿ, ಎಚ್ ಎಂಟಿ  ಮೂಲಕ ಆರ್ ಆರ್ ನಗರ್ ಚುನಾವಣಾ ಕಚೇರಿಗೆ ಮಧ್ಯಾಹ್ನ 2.40 ಕ್ಕೆ ಆಗಿಸಿದ ಮುನಿರತ್ನ ಸಾವಿರಾರು ಬೆಂಬಲಿಗರು ಜೈ ಕಾರ ಕೂಗಿದ್ರು. ಇನ್ನೂ ರಸ್ತೆಯಲ್ಲಿ ಪ್ರತಿಯೊಂದು ವಾರ್ಡ್ನ ಕಾರ್ಯಕರ್ತರು ಬೈಕ್ ಗಳ ಮೂಲಕ ಬಂದು ಆರ್ ಆರ್ ನಗರದಲ್ಲಿ ಜಮಾಯಿಸಿದ್ರು. ನಾಮಪತ್ರ ಸಲ್ಲಿಸಿ ಮಾತನಾಡಿದ ಮುನಿರತ್ನ ಐದನೇ ಬಾರಿ ನಾಮಪತ್ರ ಸಲ್ಲಿಸಿದ್ದೇನೆ, ನನಗೆ ನನ್ನ ಕ್ಷೇತ್ರದ ಜನರ ಮೇಲೆ ವಿಶ್ವಾಸವಿದೆ ಈ ಬಾರಿ ಕೂಡ ಗೆಲುವು ಸಾಧಿಸುತ್ತೇನೆ.ಗೆದ್ದೆ ಗೆಲ್ಲುತ್ತೇನೆ ಎಂದು ಅಹಂ ನಿಂದ ಹೇಳುತ್ತಿಲ್ಲ.
 
ಪ್ರತಿಯೋಬ್ಬರಿಗೂ ಕೂಡ ನಾಮಪತ್ರ ಸಲ್ಲಿಸುವ ,ಹಾಗೂ ಚುನಾವಣೆ ಗೆ  ಸ್ಫರ್ಧೆ ಮಾಡುವ ಅವಕಾಶ ಇದೆ ಮುಂದಿನ ದಿನಗಳಲ್ಲಿ ಕ್ಷೇತ್ರದಲ್ಲಿ ಮನೆ ಮನೆ ಗೆ ತೆರಳಿ ಮತಯಾಚನೆ ಮಾಡುತ್ತೇನೆ ಎಂದು ವಿಶ್ವಾಸವನ್ನು ವ್ಯಕ್ತಪಡಿಸಿದ್ರು
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್‌ನಲ್ಲಿ ಸಂಚಾರ ಸಾಥಿ ಆ್ಯಪ್‌ ಇನ್‌ಸ್ಟಾಲ್‌: ವಿವಾದ ಬೆನ್ನಲ್ಲೇ ಯೂಟರ್ನ್‌ ಹೊಡೆದ ಕೇಂದ್ರ ಸರ್ಕಾರ

ಸೂರಜ್‌ ಬೆನ್ನಲ್ಲೇ ಪ್ರಜ್ವಲ್ ರೇವಣ್ಣಗೂ ಬಿಗ್‌ಶಾಕ್: ಶಿಕ್ಷೆ ಅಮಾನತು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಮುಂದಿನ ಸುದ್ದಿ
Show comments