Publish Date: Sun, 09 Apr 2023 (15:44 IST)
Updated Date: Sun, 09 Apr 2023 (15:07 IST)
ಕಾಂಗ್ರೆಸ್ ಮುಖಂಡ K.H. ಮುನಿಯಪ್ಪಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಿದ್ದು, ಇದಕ್ಕೆ ದೇವನಹಳ್ಳಿ ಕಾಂಗ್ರೆಸ್ನಲ್ಲಿ ಆಕ್ರೋಶ ವ್ಯಕ್ತವಾಗಿತ್ತು. ಇದೀಗ K.H ಮುನಿಯಪ್ಪ ತಮ್ಮ ವಿರುದ್ಧದ ಭಿನ್ನಮತ ಶಮನ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಮುನಿಯಪ್ಪ ಬಗ್ಗೆ ದೇವನಹಳ್ಳಿ ಕಾಂಗ್ರೆಸ್ ನಾಯಕರು ಮುನಿಸಿಕೊಂಡಿದ್ರು. ಈ ಹಿನ್ನೆಲೆಯಲ್ಲಿ ಮುನಿಯಪ್ಪ ಸ್ಥಳೀಯ ಕಾಂಗ್ರೆಸ್ ನಾಯಕರಿಲ್ಲದೇ ತನ್ನ ಬೆಂಬಲಿಗರೊಂದಿಗೆ ಪ್ರಚಾರ ಕೈಗೊಂಡಿದ್ರು. ದೇವನಹಳ್ಳಿಯಿಂದ 13 ಆಕಾಂಕ್ಷಿಗಳು KPCCಗೆ ಅರ್ಜಿ ಸಲ್ಲಿಸಿದ್ದರು.. ಆದರೆ ಕಾಂಗ್ರೆಸ್ ಹೈಕಮಾಂಡ್ K.H ಮುನಿಯಪ್ಪಗೆ ಮಣೆ ಹಾಕಿತ್ತು.. ಇದ್ರಿಂದಾಗಿ ಸ್ಥಳೀಯ ಕಾಂಗ್ರೆಸ್ ಮುಖಂಡರು ಸಾಮೂಹಿಕ ರಾಜೀನಾಮೆ ಸಹ ಸಲ್ಲಿಸಿದ್ದರು.. ಇದೀಗ KHM ಭಿನ್ನಮತ ಶಮನ ಮಾಡುವಲ್ಲಿ ಯಶಸ್ವಿಯಾಗಿದ್ದು, ಕಾಂಗ್ರೆಸ್ ಭಿನ್ನಮತ ಶಮನದಿಂದ ಕಾಂಗ್ರೆಸ್ನಲ್ಲಿ ಒಗ್ಗಟ್ಟು ಪ್ರದರ್ಶನ ಮಾಡಲಾಗಿದೆ